೧ |
ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು: |
೨ |
ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ ನನ್ನ ಬಾಯೊಳಿತ್ತು ಆತನ ವಾಕ್ಯ. |
೩ |
ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು |
೪ |
ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ. |
೫ |
ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ. |
೬ |
ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ, |
೭ |
ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ. |
೮ |
ದಾವೀದನ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷೆಬಷ್ಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಎನ್ನಿಸಿಕೊಳ್ಳುವ ಇವನು ಒಮ್ಮೆಗೆ ಎಂಟುನೂರು ಮಂದಿಯನ್ನು ಕೊಂದನು. |
೯ |
ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು. |
೧೦ |
ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು. |
೧೧ |
ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬವನು ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದೆಯ ಹೊಲಕ್ಕೆ ಬಂದರು. |
೧೨ |
ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟುಮಾಡಿದರು. |
೧೩ |
ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ |
೧೪ |
ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು. |
೧೫ |
ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ, “ಬೆತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು,” ಎಂದನು |
೧೬ |
ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ. |
೧೭ |
“ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ.ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರುಮಂದಿ ಪರಾಕ್ರಮಿಗಳ ಕೃತ್ಯಗಳಿವು. |
೧೮ |
ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು. |
೧೯ |
ಇವರಲ್ಲಿ ಘನತೆ ಗೌರವ ಪಡೆದ ನಾಯಕ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ. |
೨೦ |
ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು. |
೨೧ |
ಮತ್ತೊಮ್ಮೆ ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಕೊಂದನು. ಆ ಈಜಿಪ್ಟಿನವನ ಕೈಯಲ್ಲಿ ಒಂದು ಭರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಭರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನೇ ಕೊಂದನು. |
೨೨ |
ಈ ಪರಾಕ್ರಮ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುಗೊಂಡನು. |
೨೩ |
ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು. |
೨೪ |
ಆ ಮೂವತ್ತು ಮಂದಿ ರಣವೀರರ ಪಟ್ಟಿ ಇದು: ಯೋವಾಬನ ತಮ್ಮನಾದ ಅಸಾಹೇಲನು, ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನನು. |
೨೫ |
ಹರೋದಿನವರಾದ ಶಮ್ಮ ಎಲೀಕರು, ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ, ಅಣತೋತಿನವನಾದ ಅಬೀಯೆಜೆರ್, |
೨೬ |
*** |
೨೭ |
ಹುಷಾ ಊರಿನವನಾದ ಮೆಬುನ್ನೈ, |
೨೮ |
ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ, |
೨೯ |
ನೆಟೋಪದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ನಾಡಿನ ಗಿಬೆಯ ಊರಿನ ರೀಬೈ ಎಂಬವನ ಮಗ ಇತ್ತೈ, ಪಿರಾತೋನ್ಯನಾದ ಬೆನಾಯ, |
೩೦ |
ನಹಲೇಗಾಷಿನವನಾದ ಹಿದ್ದೈ, |
೩೧ |
ಅರಾಬಾ ತಗ್ಗಿನವನಾದ ಅಬೀಅಲ್ಬೋನ್, |
೩೨ |
ಬಹುರಿಮ್ಯನಾದ ಅಜ್ಮಾವೇತ್, ಶಾಲ್ಬೋನ್ಯನಾದ ಎಲೆಯಖ್ಬಾ ಯಾಷೇನನ ಮಕ್ಕಳು, ಯೋನಾತಾನನು, |
೩೩ |
ಹರಾರ್ಯನಾದ ಶಮ್ಮ, ಹರಾರ್ಯನಾದ ಶಾರಾರನ ಮಗ ಅಹೀಯಾಮ್, |
೩೪ |
ಮಾಕಾ ಊರಿನ ಅಹಸ್ಬೈ ಎಂಬುವನ ಮಗ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್, |
೩೫ |
ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ, |
೩೬ |
ಚೋಬ ಊರಿನ ನಾತಾನ್ ಎಂಬವನ ಮಗ ಇಗಾಲ್, ಗಾದ್ಯನಾದ ಬಾನೀ, |
೩೭ |
ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ, |
೩೮ |
ಇತ್ರೀಯರಾದ ಈರಾ ಗಾರೇಬರು, ಹಿತ್ತಿಯನಾದ ಊರೀಯ, |
೩೯ |
ಹೀಗೆ ಒಟ್ಟಿಗೆ ಮೂವತ್ತೇಳು ಮಂದಿ ರಣಧೀರರಿದ್ದರು. |
Kannada Bible (KNCL) 2016 |
No Data |
ಸಮುವೇಲನು ೨ ೨೩:1 |
ಸಮುವೇಲನು ೨ ೨೩:2 |
ಸಮುವೇಲನು ೨ ೨೩:3 |
ಸಮುವೇಲನು ೨ ೨೩:4 |
ಸಮುವೇಲನು ೨ ೨೩:5 |
ಸಮುವೇಲನು ೨ ೨೩:6 |
ಸಮುವೇಲನು ೨ ೨೩:7 |
ಸಮುವೇಲನು ೨ ೨೩:8 |
ಸಮುವೇಲನು ೨ ೨೩:9 |
ಸಮುವೇಲನು ೨ ೨೩:10 |
ಸಮುವೇಲನು ೨ ೨೩:11 |
ಸಮುವೇಲನು ೨ ೨೩:12 |
ಸಮುವೇಲನು ೨ ೨೩:13 |
ಸಮುವೇಲನು ೨ ೨೩:14 |
ಸಮುವೇಲನು ೨ ೨೩:15 |
ಸಮುವೇಲನು ೨ ೨೩:16 |
ಸಮುವೇಲನು ೨ ೨೩:17 |
ಸಮುವೇಲನು ೨ ೨೩:18 |
ಸಮುವೇಲನು ೨ ೨೩:19 |
ಸಮುವೇಲನು ೨ ೨೩:20 |
ಸಮುವೇಲನು ೨ ೨೩:21 |
ಸಮುವೇಲನು ೨ ೨೩:22 |
ಸಮುವೇಲನು ೨ ೨೩:23 |
ಸಮುವೇಲನು ೨ ೨೩:24 |
ಸಮುವೇಲನು ೨ ೨೩:25 |
ಸಮುವೇಲನು ೨ ೨೩:26 |
ಸಮುವೇಲನು ೨ ೨೩:27 |
ಸಮುವೇಲನು ೨ ೨೩:28 |
ಸಮುವೇಲನು ೨ ೨೩:29 |
ಸಮುವೇಲನು ೨ ೨೩:30 |
ಸಮುವೇಲನು ೨ ೨೩:31 |
ಸಮುವೇಲನು ೨ ೨೩:32 |
ಸಮುವೇಲನು ೨ ೨೩:33 |
ಸಮುವೇಲನು ೨ ೨೩:34 |
ಸಮುವೇಲನು ೨ ೨೩:35 |
ಸಮುವೇಲನು ೨ ೨೩:36 |
ಸಮುವೇಲನು ೨ ೨೩:37 |
ಸಮುವೇಲನು ೨ ೨೩:38 |
ಸಮುವೇಲನು ೨ ೨೩:39 |
ಸಮುವೇಲನು ೨ 1 / ಸಮು೨ 1 |
ಸಮುವೇಲನು ೨ 2 / ಸಮು೨ 2 |
ಸಮುವೇಲನು ೨ 3 / ಸಮು೨ 3 |
ಸಮುವೇಲನು ೨ 4 / ಸಮು೨ 4 |
ಸಮುವೇಲನು ೨ 5 / ಸಮು೨ 5 |
ಸಮುವೇಲನು ೨ 6 / ಸಮು೨ 6 |
ಸಮುವೇಲನು ೨ 7 / ಸಮು೨ 7 |
ಸಮುವೇಲನು ೨ 8 / ಸಮು೨ 8 |
ಸಮುವೇಲನು ೨ 9 / ಸಮು೨ 9 |
ಸಮುವೇಲನು ೨ 10 / ಸಮು೨ 10 |
ಸಮುವೇಲನು ೨ 11 / ಸಮು೨ 11 |
ಸಮುವೇಲನು ೨ 12 / ಸಮು೨ 12 |
ಸಮುವೇಲನು ೨ 13 / ಸಮು೨ 13 |
ಸಮುವೇಲನು ೨ 14 / ಸಮು೨ 14 |
ಸಮುವೇಲನು ೨ 15 / ಸಮು೨ 15 |
ಸಮುವೇಲನು ೨ 16 / ಸಮು೨ 16 |
ಸಮುವೇಲನು ೨ 17 / ಸಮು೨ 17 |
ಸಮುವೇಲನು ೨ 18 / ಸಮು೨ 18 |
ಸಮುವೇಲನು ೨ 19 / ಸಮು೨ 19 |
ಸಮುವೇಲನು ೨ 20 / ಸಮು೨ 20 |
ಸಮುವೇಲನು ೨ 21 / ಸಮು೨ 21 |
ಸಮುವೇಲನು ೨ 22 / ಸಮು೨ 22 |
ಸಮುವೇಲನು ೨ 23 / ಸಮು೨ 23 |
ಸಮುವೇಲನು ೨ 24 / ಸಮು೨ 24 |
|
|
|
|
|