೧ |
ಅದಕ್ಕೆ ಯೋಬನು ಪ್ರತ್ಯುತ್ತರವಾಗಿ ಹೀಗೆಂದನು: |
೨ |
:ಹೌದ್ಹೌದು ನೀವೇ ಮಹಾಜನ, ನಿಮ್ಮೊಡನೆಯೇ ಸಾಯುವುದು ಸುಜ್ಞಾನ! |
೩ |
ನಿಮ್ಮ ಹಾಗೆ ನಾನೂ ಬಲ್ಲವ ನಿಮಗಿಂತ ನಾನೇನೂ ಕೀಳಲ್ಲ. ಇದು ಯಾರಿಗೆ ತಾನೆ ತಿಳಿದಿಲ್ಲ? |
೪ |
ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು. |
೫ |
ದಲಿತರನ್ನು ಕಂಡರೆ ಸುಖಜೀವಿಗಳಿಗೆ ತಾತ್ಸಾರ ಜಾರಿ ಬೀಳಲಿರುವವರಿಗೆ ಕಾದಿದೆ ತಿರಸ್ಕಾರ. |
೬ |
ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು! |
೭ |
ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು. |
೮ |
ಕ್ರಿಮಿಕೀಟಗಳನ್ನು ಕೇಳು, ಅವು ನಿನಗೆ ಬೋಧಿಸುವುವು ಸಮುದ್ರದ ಮೀನುಗಳು ನಿನಗೆ ಉಪದೇಶ ಮಾಡುವುವು. |
೯ |
ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ? |
೧೦ |
ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ. |
೧೧ |
ನಾಲಿಗೆ ರುಚಿನೋಡುವಂತೆಯೆ ಕಿವಿ ನುಡಿಯನು ವಿವೇಚಿಸುತ್ತದೆ. |
೧೨ |
ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ. |
೧೩ |
ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ. |
೧೪ |
ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು. |
೧೫ |
ಆತ ನೀರನ್ನು ತಡೆದರೆ, ಬತ್ತಿಹೋಗುತ್ತದೆ ಬೆಳೆಯೆಲ್ಲ ತೂಬೆತ್ತಿದರೆ ಮುಳುಗಿಹೋಗುತ್ತದೆ ಇಳೆಯೆಲ್ಲ. |
೧೬ |
ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ. |
೧೭ |
ಮಂತ್ರಿಗಳನು ಬರಿಬತ್ತಲೆಯಾಗಿ ನಡೆಸುತ್ತಾನೆ ನ್ಯಾಯಾಧಿಪತಿಗಳನು ಮೂರ್ಖರನ್ನಾಗಿಸುತ್ತಾನೆ. |
೧೮ |
ಅರಸರು ಹಾಕಿದ ಬಂಧನವನ್ನು ಬಿಚ್ಚಿ ಬಿಗಿಯುತ್ತಾನೆ ಅವರ ಸೊಂಟಕ್ಕೆ ಚಿಂದಿ. |
೧೯ |
ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ. |
೨೦ |
ಮೂಕರನ್ನಾಗಿಸುತ್ತಾನೆ ವಾಕ್ ಚತುರರನ್ನು ಹಿರಿಯರ ಧೀಮಂತಿಕೆಯನ್ನು ತೆಗೆದುಬಿಡುತ್ತಾನೆ. |
೨೧ |
ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು. |
೨೨ |
ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ. |
೨೩ |
ರಾಷ್ಟ್ರಗಳನ್ನು ಬೆಳೆಸುತ್ತಾನೆ, ಅಳಿಸುತ್ತಾನೆ ಅವುಗಳನ್ನು ಹರಡುತ್ತಾನೆ, ಹೊರದೂಡುತ್ತಾನೆ. |
೨೪ |
ಭೂಪತಿಗಳನ್ನು ಬುದ್ಧಿಹೀನರನ್ನಾಗಿಸುತ್ತಾನೆ ದಾರಿಕಾಣದ ಅರಣ್ಯದಲಿ ಅಲೆದಾಡಿಸುತ್ತಾನೆ. |
೨೫ |
ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”
|
Kannada Bible (KNCL) 2016 |
No Data |