೧ |
ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು. |
೨ |
ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ. |
೩ |
ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ. |
೪ |
ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ. |
೫ |
ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು. |
೬ |
ಕೆಟ್ಟವನು ತನ್ನ ಪಾಪಪಾಶದಲ್ಲೆ ಸಿಕ್ಕಿಬೀಳುವನು; ಒಳ್ಳೆಯವನು ಉಲ್ಲಾಸದಿಂದ ಹಾಡಿ ಹರ್ಷಿಸುವನು. |
೭ |
ನೀತಿವಂತನು ದಲಿತರ ಹಕ್ಕುಬಾಧ್ಯತೆಯನ್ನು ಕಾದಿರಿಸುವನು; ದುಷ್ಟರಿಗಿಲ್ಲ ಅದನ್ನು ಗ್ರಹಿಸುವಷ್ಟು ಅಕ್ಕರೆ. |
೮ |
ಕುಚೋದ್ಯರು ಪಟ್ಟಣಕ್ಕೆ ಬೆಂಕಿ ಹಚ್ಚುವರು; ಜ್ಞಾನಿಗಳೊ ರೋಷಾಗ್ನಿಯನ್ನು ಆರಿಸುವರು. |
೯ |
ಮೂರ್ಖನ ಸಂಗಡ ಜ್ಞಾನಿ ತರ್ಕಮಾಡಿದ್ದೆ ಆದರೆ ಆ ಮೂರ್ಖ ರೇಗಬಹುದು, ನಗಬಹುದು, ತರ್ಕಮಾತ್ರ ಮುಗಿಯದು. |
೧೦ |
ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು. |
೧೧ |
ಮೂಢನು ತನ್ನ ಕೋಪವನ್ನೆಲ್ಲ ವ್ಯಕ್ತಪಡಿಸುವನು; ಜ್ಞಾನಿ ತನ್ನ ಕೋಪವನ್ನು ತಡೆಹಿಡಿದು ಶಮನಗೊಳ್ಳುವನು. |
೧೨ |
ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು. |
೧೩ |
ದಲಿತನೂ, ದಬ್ಬಾಳಿಕೆ ನಡೆಸುವವನೂ ಸ್ಥಿತಿಯಲ್ಲಿ ಎದುರುಬದುರು; ಆದರೆ ಸರ್ವೇಶ್ವರನೆ ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವವನು. |
೧೪ |
ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ. |
೧೫ |
ಬೆತ್ತ ಬೆದರಿಕೆಗಳು ಜ್ಞಾನ ತರುತ್ತವೆ; ಶಿಕ್ಷಿಸದೆ ಬಿಟ್ಟ ಮಗನು ತಾಯಿಗೆ ತರುತ್ತಾನೆ ಅಪಕೀರ್ತಿ. |
೧೬ |
ದುಷ್ಟರ ವೃದ್ಧಿ ಪಾಪಾಭಿವೃದ್ಧಿ; ಅವರ ಪತನವನ್ನು ಸಜ್ಜನರು ಕಣ್ಣಾರೆ ಕಾಣುವರು. |
೧೭ |
ನಿನ್ನ ಮಗನನ್ನು ದಂಡಿಸಿ ಸರಿಪಡಿಸು; ಅವನು ನಿನ್ನನ್ನು ಸಂತೋಷಪಡಿಸುವನು, ಮನೋಲ್ಲಾಸಗೊಳಿಸುವನು. |
೧೮ |
ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು. |
೧೯ |
ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು. |
೨೦ |
ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲು ಮೂಢನ ಸುಧಾರಣೆ ಹೆಚ್ಚು ಸಾಧ್ಯ. |
೨೧ |
ಬಾಲ್ಯದಿಂದ ಕೋಮಲವಾಗಿ ಸಾಕಲಾದ ಸೇವಕನು, ಕೊನೆಗೆ ಕುಮಾರನಂತೆ ನಿನ್ನದೆಲ್ಲವನ್ನು ಕಿತ್ತುಕೊಂಡಾನು. |
೨೨ |
ಕೋಪಿಷ್ಠನು ಜಗಳವೆಬ್ಬಿಸುವನು; ಕ್ರೋಧಶೀಲನು ದೋಷಭರಿತನು. |
೨೩ |
ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು. |
೨೪ |
ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು. |
೨೫ |
ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು. |
೨೬ |
ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು. |
೨೭ |
ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.
|
Kannada Bible (KNCL) 2016 |
No Data |