೧ |
ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು. |
೨ |
ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು. |
೩ |
ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ. |
೪ |
ಗಾಳಿಗಾಗಿಯೇ ಕಾದಿರುವವನು, ಮೋಡಕ್ಕಾಗಿಯೇ ಎದುರು ನೋಡುತ್ತಿರುವವನು ಎಂದಿಗೂ ಬೀಜಬಿತ್ತಲಾರನು; ಎಂದಿಗೂ ಪೈರು ಕೊಯ್ಯಲಾರನು. |
೫ |
ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು. |
೬ |
ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು. |
೭ |
ಬೆಳಕು ಬಹಳ ಇಂಪು; ಸೂರ್ಯನ ಕಾಂತಿ ಕಣ್ಣುಗಳಿಗೆ ಸೊಂಪು. ಮಾನವನು ಎಷ್ಟೇ ಧೀರ್ಘಕಾಲ ಬದುಕಿರಲಿ ತನ್ನ ಬಾಳಿನ ದಿನಗಳಲ್ಲೆಲ್ಲಾ ಆನಂದಿಸಲಿ; ಆದರೆ ಅಂಧಕಾರದ ದಿನಗಳು ಸಹ ಬಹಳ ಇವೆ ಎಂಬುದನ್ನು ನೆನಪಿಗೆ ತಂದುಕೊಳ್ಳಲಿ. ಆ ಬಳಿಕ ಬರುವುದೆಲ್ಲಾ ನಿರರ್ಥಕ. |
೮ |
ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು. |
೯ |
*** |
೧೦ |
ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.
|
Kannada Bible (KNCL) 2016 |
No Data |