೧ |
ಸರ್ವೇಶ್ವರ ಸ್ವಾಮಿ ನನಗೆ ಈ ಸಂದೇಶವನ್ನು ದಯಪಾಲಿಸಿದರು: |
೨ |
“ನೀನು ಮದುವೆಯಾಗಬೇಡ, ಗಂಡು ಅಥವಾ ಹೆಣ್ಣು ಮಕ್ಕಳು ನಿನಗೆ ಈ ಸ್ಥಳದಲ್ಲಿ ಹುಟ್ಟದಿರಲಿ. |
೩ |
ಏಕೆಂದರೆ ಇಲ್ಲಿ ಆ ಗಂಡುಹೆಣ್ಣು ಮಕ್ಕಳಿಗೆ, ಅವರನ್ನು ಹೆತ್ತ ತಾಯಿಯರಿಗೆ, ಅವರನ್ನು ಈ ನಾಡಿನಲ್ಲಿ ಪಡೆದ ತಂದೆಯರಿಗೆ ಸಂಭವಿಸಲು ಇರುವುದನ್ನು ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು: |
೪ |
ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.” |
೫ |
ಸರ್ವೇಶ್ವರ ಮತ್ತೆ ನನಗೆ ಹೀಗೆಂದರು: “ನೀನು ಸಾವು ಜರುಗಿದ ಮನೆಗಳಿಗೆ ಹೋಗಬೇಡ. ಅಲ್ಲಿ ನಡೆಯುವ ಗೋಳಾಟದಲ್ಲಿ ಸೇರಬೇಡ. ಎದೆಬಡಿದುಕೊಂಡು ಸಂತಾಪ ಸೂಚಿಸಬೇಕಾಗಿಲ್ಲ. ಏಕೆಂದರೆ, ನಾನು ದಯಪಾಲಿಸಿದ ಶಾಂತಿಯನ್ನೂ ಪ್ರೀತಿಯನ್ನೂ ಕೃಪೆಯನ್ನೂ ಆ ಜನರಿಂದ ತೆಗೆದುಬಿಟ್ಟಿದ್ದೇನೆ. |
೬ |
ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ. |
೭ |
ಸತ್ತವನಿಗಾಗಿ ದುಃಖಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗು ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ. |
೮ |
“ಔತಣದ ಮನೆಗೂ ಹೋಗಬೇಡ. ಅಲ್ಲಿಯವರೊಡನೆ ಕುಳಿತು, ತಿಂದು, ಕುಡಿಯಬೇಡ, |
೯ |
ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು: ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು. |
೧೦ |
“ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು. |
೧೧ |
ಆಗ ನೀನು ಅವರಿಗೆ ಹೀಗೆಂದು ಹೇಳಬೇಕು: ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ: ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು. |
೧೨ |
ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ. |
೧೩ |
ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು\. |
೧೪ |
ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು. |
೧೫ |
ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು. |
೧೬ |
ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು. |
೧೭ |
ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ. |
೧೮ |
ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.” |
೧೯ |
“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು. |
೨೦ |
ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೆ? ಕಲ್ಪಿಸಿಕೊಂಡರೆ ಅವು ದೇವರುಗಳೇ ಅಲ್ಲ,’ ಎಂದು ನಿವೇದಿಸುವುವು.” |
೨೧ |
ಸರ್ವೇಶ್ವರ: “ಆದುದರಿಂದ ಇಗೋ, ಇಂದೊಮ್ಮೆ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು. ಚೆನ್ನಾಗಿ ಗ್ರಹಿಸುವಂತೆ ಮಾಡುವೆನು. ನನ್ನ ನಾಮಧೇಯ ಸರ್ವೇಶ್ವರ ಎಂದೇ ಅವರು ಗುರುತು ಹಚ್ಚುವರು.”
|
Kannada Bible (KNCL) 2016 |
No Data |
|
|
|
|
|
|
|
|
|
|
ಯೆರೆಮೀಯನ ಗ್ರಂಥ ೧೬:1 |
ಯೆರೆಮೀಯನ ಗ್ರಂಥ ೧೬:2 |
ಯೆರೆಮೀಯನ ಗ್ರಂಥ ೧೬:3 |
ಯೆರೆಮೀಯನ ಗ್ರಂಥ ೧೬:4 |
ಯೆರೆಮೀಯನ ಗ್ರಂಥ ೧೬:5 |
ಯೆರೆಮೀಯನ ಗ್ರಂಥ ೧೬:6 |
ಯೆರೆಮೀಯನ ಗ್ರಂಥ ೧೬:7 |
ಯೆರೆಮೀಯನ ಗ್ರಂಥ ೧೬:8 |
ಯೆರೆಮೀಯನ ಗ್ರಂಥ ೧೬:9 |
ಯೆರೆಮೀಯನ ಗ್ರಂಥ ೧೬:10 |
ಯೆರೆಮೀಯನ ಗ್ರಂಥ ೧೬:11 |
ಯೆರೆಮೀಯನ ಗ್ರಂಥ ೧೬:12 |
ಯೆರೆಮೀಯನ ಗ್ರಂಥ ೧೬:13 |
ಯೆರೆಮೀಯನ ಗ್ರಂಥ ೧೬:14 |
ಯೆರೆಮೀಯನ ಗ್ರಂಥ ೧೬:15 |
ಯೆರೆಮೀಯನ ಗ್ರಂಥ ೧೬:16 |
ಯೆರೆಮೀಯನ ಗ್ರಂಥ ೧೬:17 |
ಯೆರೆಮೀಯನ ಗ್ರಂಥ ೧೬:18 |
ಯೆರೆಮೀಯನ ಗ್ರಂಥ ೧೬:19 |
ಯೆರೆಮೀಯನ ಗ್ರಂಥ ೧೬:20 |
ಯೆರೆಮೀಯನ ಗ್ರಂಥ ೧೬:21 |
|
|
|
|
|
|
ಯೆರೆಮೀಯನ ಗ್ರಂಥ 1 / ಯೆಗ್ರ 1 |
ಯೆರೆಮೀಯನ ಗ್ರಂಥ 2 / ಯೆಗ್ರ 2 |
ಯೆರೆಮೀಯನ ಗ್ರಂಥ 3 / ಯೆಗ್ರ 3 |
ಯೆರೆಮೀಯನ ಗ್ರಂಥ 4 / ಯೆಗ್ರ 4 |
ಯೆರೆಮೀಯನ ಗ್ರಂಥ 5 / ಯೆಗ್ರ 5 |
ಯೆರೆಮೀಯನ ಗ್ರಂಥ 6 / ಯೆಗ್ರ 6 |
ಯೆರೆಮೀಯನ ಗ್ರಂಥ 7 / ಯೆಗ್ರ 7 |
ಯೆರೆಮೀಯನ ಗ್ರಂಥ 8 / ಯೆಗ್ರ 8 |
ಯೆರೆಮೀಯನ ಗ್ರಂಥ 9 / ಯೆಗ್ರ 9 |
ಯೆರೆಮೀಯನ ಗ್ರಂಥ 10 / ಯೆಗ್ರ 10 |
ಯೆರೆಮೀಯನ ಗ್ರಂಥ 11 / ಯೆಗ್ರ 11 |
ಯೆರೆಮೀಯನ ಗ್ರಂಥ 12 / ಯೆಗ್ರ 12 |
ಯೆರೆಮೀಯನ ಗ್ರಂಥ 13 / ಯೆಗ್ರ 13 |
ಯೆರೆಮೀಯನ ಗ್ರಂಥ 14 / ಯೆಗ್ರ 14 |
ಯೆರೆಮೀಯನ ಗ್ರಂಥ 15 / ಯೆಗ್ರ 15 |
ಯೆರೆಮೀಯನ ಗ್ರಂಥ 16 / ಯೆಗ್ರ 16 |
ಯೆರೆಮೀಯನ ಗ್ರಂಥ 17 / ಯೆಗ್ರ 17 |
ಯೆರೆಮೀಯನ ಗ್ರಂಥ 18 / ಯೆಗ್ರ 18 |
ಯೆರೆಮೀಯನ ಗ್ರಂಥ 19 / ಯೆಗ್ರ 19 |
ಯೆರೆಮೀಯನ ಗ್ರಂಥ 20 / ಯೆಗ್ರ 20 |
ಯೆರೆಮೀಯನ ಗ್ರಂಥ 21 / ಯೆಗ್ರ 21 |
ಯೆರೆಮೀಯನ ಗ್ರಂಥ 22 / ಯೆಗ್ರ 22 |
ಯೆರೆಮೀಯನ ಗ್ರಂಥ 23 / ಯೆಗ್ರ 23 |
ಯೆರೆಮೀಯನ ಗ್ರಂಥ 24 / ಯೆಗ್ರ 24 |
ಯೆರೆಮೀಯನ ಗ್ರಂಥ 25 / ಯೆಗ್ರ 25 |
ಯೆರೆಮೀಯನ ಗ್ರಂಥ 26 / ಯೆಗ್ರ 26 |
ಯೆರೆಮೀಯನ ಗ್ರಂಥ 27 / ಯೆಗ್ರ 27 |
ಯೆರೆಮೀಯನ ಗ್ರಂಥ 28 / ಯೆಗ್ರ 28 |
ಯೆರೆಮೀಯನ ಗ್ರಂಥ 29 / ಯೆಗ್ರ 29 |
ಯೆರೆಮೀಯನ ಗ್ರಂಥ 30 / ಯೆಗ್ರ 30 |
ಯೆರೆಮೀಯನ ಗ್ರಂಥ 31 / ಯೆಗ್ರ 31 |
ಯೆರೆಮೀಯನ ಗ್ರಂಥ 32 / ಯೆಗ್ರ 32 |
ಯೆರೆಮೀಯನ ಗ್ರಂಥ 33 / ಯೆಗ್ರ 33 |
ಯೆರೆಮೀಯನ ಗ್ರಂಥ 34 / ಯೆಗ್ರ 34 |
ಯೆರೆಮೀಯನ ಗ್ರಂಥ 35 / ಯೆಗ್ರ 35 |
ಯೆರೆಮೀಯನ ಗ್ರಂಥ 36 / ಯೆಗ್ರ 36 |
ಯೆರೆಮೀಯನ ಗ್ರಂಥ 37 / ಯೆಗ್ರ 37 |
ಯೆರೆಮೀಯನ ಗ್ರಂಥ 38 / ಯೆಗ್ರ 38 |
ಯೆರೆಮೀಯನ ಗ್ರಂಥ 39 / ಯೆಗ್ರ 39 |
ಯೆರೆಮೀಯನ ಗ್ರಂಥ 40 / ಯೆಗ್ರ 40 |
ಯೆರೆಮೀಯನ ಗ್ರಂಥ 41 / ಯೆಗ್ರ 41 |
ಯೆರೆಮೀಯನ ಗ್ರಂಥ 42 / ಯೆಗ್ರ 42 |
ಯೆರೆಮೀಯನ ಗ್ರಂಥ 43 / ಯೆಗ್ರ 43 |
ಯೆರೆಮೀಯನ ಗ್ರಂಥ 44 / ಯೆಗ್ರ 44 |
ಯೆರೆಮೀಯನ ಗ್ರಂಥ 45 / ಯೆಗ್ರ 45 |
ಯೆರೆಮೀಯನ ಗ್ರಂಥ 46 / ಯೆಗ್ರ 46 |
ಯೆರೆಮೀಯನ ಗ್ರಂಥ 47 / ಯೆಗ್ರ 47 |
ಯೆರೆಮೀಯನ ಗ್ರಂಥ 48 / ಯೆಗ್ರ 48 |
ಯೆರೆಮೀಯನ ಗ್ರಂಥ 49 / ಯೆಗ್ರ 49 |
ಯೆರೆಮೀಯನ ಗ್ರಂಥ 50 / ಯೆಗ್ರ 50 |
ಯೆರೆಮೀಯನ ಗ್ರಂಥ 51 / ಯೆಗ್ರ 51 |
ಯೆರೆಮೀಯನ ಗ್ರಂಥ 52 / ಯೆಗ್ರ 52 |