೧ |
ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ. |
೨ |
ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು. |
೩ |
“ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ. |
೪ |
ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ. |
೫ |
ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು. |
೬ |
ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು. |
೭ |
ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು. |
೮ |
ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.” |
೯ |
“ಇಸ್ರಯೇಲ್, ನೀನು ಗಿಬ್ಯದಲ್ಲಿದ್ದ ಕಾಲದಿಂದ ನನಗೆ ವಿರುದ್ಧ ಪಾಪಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬ್ಯದ ನಿವಾಸಿಗಳು ಯುದ್ಧಕ್ಕೆ ತುತ್ತಾಗಲಿದ್ದಾರೆ. |
೧೦ |
ಸಕಾಲದಲ್ಲಿ ನಾನು ಅವರನ್ನು ದಂಡಿಸುವೆನು; ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿ ಆಗುವುದು; ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು. |
೧೧ |
“ಎಫ್ರಯಿಮ್ ತೆನೆಹುಲ್ಲನ್ನು ತುಳಿಯುವುದರಲ್ಲಿ ಪಳಗಿರುವ ಹೋರಿಕರು. ಅದರ ಅಂದವಾದ ಹೆಗಲಮೇಲೆ ನೇಗಿಲನ್ನು ಇಟ್ಟಿರಲಿಲ್ಲ. ಜುದೇಯವು ಉಳುವಂತೆ ಮಾಡಿದೆನು. ಯಕೋಬ್ ಕುಂಟೆ ಎಳೆಯುವಂತೆ ಮಾಡಿದೆನು. ಈಗ ಎಫ್ರಯಿಮನ್ನು ನೊಗಕ್ಕೆ ಹೂಡುವೆನು. |
೧೨ |
ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು. |
೧೩ |
ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ. |
೧೪ |
ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು. |
೧೫ |
ಬೇತೇಲಿನ ಜನರೇ, ನಿಮಗೂ ಇಂಥ ದುರ್ಗತಿಯೇ ಸಂಭವಿಸಲಿರುವುದು. ಬೆಳಗಾಗುವುದರೊಳಗೆ ಇಸ್ರಯೇಲಿನ ರಾಜನು ಹತನಾಗುವನು. ಕಾರಣ, ನಿಮ್ಮ ಅಕ್ರಮವು ಘೋರವಾದುದು!”
|
Kannada Bible (KNCL) 2016 |
No Data |
|
|
|
|
|
|
|
|
|
|
ಹೊಶೇಯನ ೧೦:1 |
ಹೊಶೇಯನ ೧೦:2 |
ಹೊಶೇಯನ ೧೦:3 |
ಹೊಶೇಯನ ೧೦:4 |
ಹೊಶೇಯನ ೧೦:5 |
ಹೊಶೇಯನ ೧೦:6 |
ಹೊಶೇಯನ ೧೦:7 |
ಹೊಶೇಯನ ೧೦:8 |
ಹೊಶೇಯನ ೧೦:9 |
ಹೊಶೇಯನ ೧೦:10 |
ಹೊಶೇಯನ ೧೦:11 |
ಹೊಶೇಯನ ೧೦:12 |
ಹೊಶೇಯನ ೧೦:13 |
ಹೊಶೇಯನ ೧೦:14 |
ಹೊಶೇಯನ ೧೦:15 |
|
|
|
|
|
|
ಹೊಶೇಯನ 1 / ಹೊಶ 1 |
ಹೊಶೇಯನ 2 / ಹೊಶ 2 |
ಹೊಶೇಯನ 3 / ಹೊಶ 3 |
ಹೊಶೇಯನ 4 / ಹೊಶ 4 |
ಹೊಶೇಯನ 5 / ಹೊಶ 5 |
ಹೊಶೇಯನ 6 / ಹೊಶ 6 |
ಹೊಶೇಯನ 7 / ಹೊಶ 7 |
ಹೊಶೇಯನ 8 / ಹೊಶ 8 |
ಹೊಶೇಯನ 9 / ಹೊಶ 9 |
ಹೊಶೇಯನ 10 / ಹೊಶ 10 |
ಹೊಶೇಯನ 11 / ಹೊಶ 11 |
ಹೊಶೇಯನ 12 / ಹೊಶ 12 |
ಹೊಶೇಯನ 13 / ಹೊಶ 13 |
ಹೊಶೇಯನ 14 / ಹೊಶ 14 |