೧ |
ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ: |
೨ |
“ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.” |
೩ |
ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.” |
೪ |
ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ. |
೫ |
ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.” |
೬ |
ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು. |
೭ |
ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ! |
೮ |
ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು, |
೯ |
ಬಲಾಢ್ಯರನ್ನು ತಟ್ಟನೆ ಬಡಿದು ಕೋಟೆಗಳ ಕೆಡವುವಾತನು ಆತನೇ, ಸರ್ವೇಶ್ವರಸ್ವಾಮಿ ಎಂಬುದೇ ಆತನ ನಾಮಧೇಯ. |
೧೦ |
ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ. |
೧೧ |
ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ. |
೧೨ |
ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು. |
೧೩ |
ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು. |
೧೪ |
ಕೆಟ್ಟದ್ದನ್ನು ಬಿಟ್ಟುಬಿಡಿ. ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು. |
೧೫ |
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು. |
೧೬ |
ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು. |
೧೭ |
ಪ್ರತಿಯೊಂದು ದ್ರಾಕ್ಷಾತೋಟದಲ್ಲಿ ಜನರು ರೋದಿಸುವರು. ಏಕೆಂದರೆ ನಿಮ್ಮನ್ನು ದಂಡಿಸಲು ನಿಮ್ಮ ಮಧ್ಯೆ ಹಾದುಹೋಗಲಿದ್ದೇನೆ, ಇದು ಸರ್ವೇಶ್ವರಸ್ವಾಮಿಯ ನುಡಿ.” |
೧೮ |
ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು. |
೧೯ |
ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು. |
೨೦ |
ಖಂಡಿತವಾಗಿ ಸ್ವಾಮಿಯ ದಿನ ಬೆಳಕಾಗಿರದು, ಕತ್ತಲೆಯಾಗಿರುತ್ತದೆ, ಒಂದು ಚುಕ್ಕೆಯೂ ಇಲ್ಲದ ಕಾರಿರುಳಂತಿರುತ್ತದೆ. |
೨೧ |
“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ. |
೨೨ |
ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು. |
೨೩ |
ನಿಮ್ಮ ಭಜನೆ ನಿಂತುಹೋಗಲಿ; ನಿಮ್ಮ ವೀಣಾವಾದ್ಯಗಳು ತೊಲಗಲಿ. |
೨೪ |
ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ. |
೨೫ |
“ಇಸ್ರಯೇಲಿನ ವಂಶದವರೇ, ನಲವತ್ತು ವರ್ಷಗಳ ಕಾಲ ನೀವು ಮರಳುಗಾಡಿನಲ್ಲಿದ್ದಾಗ, ಬಲಿಪ್ರಾಣಿಗಳನ್ನಾಗಲೀ, ಧಾನ್ಯನೈವೇದ್ಯಗಳನ್ನಾಗಲಿ ನೀವು ಅರ್ಪಿಸಬೇಕೆಂದು ನಾನು ಕೇಳಿದ್ದುಂಟೋ? |
೨೬ |
ಆದರೆ ಈಗ ನೀವು ನಿರ್ಮಿಸಿಕೊಂಡಿರುವ ಮೂರ್ತಿಗಳಾದ ಸಿಕ್ಕುತ್ ರಾಜೇಶ್ವರನನ್ನೂ ಕಿಯೂನ್ ಎಂಬ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು. |
೨೭ |
ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
|
Kannada Bible (KNCL) 2016 |
No Data |
|
|
|
|
|
|
|
|
|
|
ಆಮೋಸನ ೫:1 |
ಆಮೋಸನ ೫:2 |
ಆಮೋಸನ ೫:3 |
ಆಮೋಸನ ೫:4 |
ಆಮೋಸನ ೫:5 |
ಆಮೋಸನ ೫:6 |
ಆಮೋಸನ ೫:7 |
ಆಮೋಸನ ೫:8 |
ಆಮೋಸನ ೫:9 |
ಆಮೋಸನ ೫:10 |
ಆಮೋಸನ ೫:11 |
ಆಮೋಸನ ೫:12 |
ಆಮೋಸನ ೫:13 |
ಆಮೋಸನ ೫:14 |
ಆಮೋಸನ ೫:15 |
ಆಮೋಸನ ೫:16 |
ಆಮೋಸನ ೫:17 |
ಆಮೋಸನ ೫:18 |
ಆಮೋಸನ ೫:19 |
ಆಮೋಸನ ೫:20 |
ಆಮೋಸನ ೫:21 |
ಆಮೋಸನ ೫:22 |
ಆಮೋಸನ ೫:23 |
ಆಮೋಸನ ೫:24 |
ಆಮೋಸನ ೫:25 |
ಆಮೋಸನ ೫:26 |
ಆಮೋಸನ ೫:27 |
|
|
|
|
|
|
ಆಮೋಸನ 1 / ಆಮ 1 |
ಆಮೋಸನ 2 / ಆಮ 2 |
ಆಮೋಸನ 3 / ಆಮ 3 |
ಆಮೋಸನ 4 / ಆಮ 4 |
ಆಮೋಸನ 5 / ಆಮ 5 |
ಆಮೋಸನ 6 / ಆಮ 6 |
ಆಮೋಸನ 7 / ಆಮ 7 |
ಆಮೋಸನ 8 / ಆಮ 8 |
ಆಮೋಸನ 9 / ಆಮ 9 |