೧ |
“ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.” |
೨ |
ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: “ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು. |
೩ |
ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು. |
೪ |
ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು. |
೫ |
ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ. |
೬ |
ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’ |
೭ |
ನಿನ್ನ ಸಾಲಗಾರರೇ ತಟ್ಟನೆ ನಿನಗೆದುರಾಗಿ ನಿಲ್ಲುವರು; ಬಾಕಿದಾರರೇ ಎಚ್ಚೆತ್ತು ನಿನಗೆ ಬೆದರಿಕೆ ಹಾಕುವರು. ಕೊಳ್ಳೆಹೊಡೆದು ನಿನ್ನನ್ನು ಲೂಟಿಮಾಡುವರು. |
೮ |
ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು. |
೯ |
ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ! |
೧೦ |
ನಿನ್ನ ಯೋಜನೆಗಳಿಂದ ನಿನ್ನ ಮನೆತನಕ್ಕೆ ಅಪಕೀರ್ತಿ ತಂದುಕೊಂಡಿರುವೆ. ಹಲವಾರು ನಾಡುಗಳನ್ನು ನಿರ್ಮೂಲಮಾಡಿ ನಿನ್ನ ವಂಶಕ್ಕೆ ವಿನಾಶವನ್ನು ಬರಮಾಡಿಕೊಂಡಿರುವೆ. |
೧೧ |
ಗೋಡೆಯಲ್ಲಿ ಇರುವ ಕಲ್ಲುಗಳೇ ನಿನಗೆ ವಿರುದ್ಧವಾಗಿ ಕೂಗುವುವು. ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೂಡಿಸುವುವು. |
೧೨ |
ನರಹತ್ಯೆಯಿಂದ ನಗರಗಳನ್ನು ನಿರ್ಮಿಸುವವನಿಗೆ ಧಿಕ್ಕಾರ! ಅನ್ಯಾಯವಾದ ಅಸ್ತಿವಾರದ ಮೇಲೆ ಊರನ್ನು ಕಟ್ಟುವವನಿಗೆ ಧಿಕ್ಕಾರ! |
೧೩ |
ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ. |
೧೪ |
ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು. |
೧೫ |
ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ! |
೧೬ |
ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು. |
೧೭ |
ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು. |
೧೮ |
ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ. |
೧೯ |
ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ. |
೨೦ |
ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.
|
Kannada Bible (KNCL) 2016 |
No Data |
|
|
|
|
|
|
|
|
|
|
ಹಬಕ್ಕೂಕನ ೨:1 |
ಹಬಕ್ಕೂಕನ ೨:2 |
ಹಬಕ್ಕೂಕನ ೨:3 |
ಹಬಕ್ಕೂಕನ ೨:4 |
ಹಬಕ್ಕೂಕನ ೨:5 |
ಹಬಕ್ಕೂಕನ ೨:6 |
ಹಬಕ್ಕೂಕನ ೨:7 |
ಹಬಕ್ಕೂಕನ ೨:8 |
ಹಬಕ್ಕೂಕನ ೨:9 |
ಹಬಕ್ಕೂಕನ ೨:10 |
ಹಬಕ್ಕೂಕನ ೨:11 |
ಹಬಕ್ಕೂಕನ ೨:12 |
ಹಬಕ್ಕೂಕನ ೨:13 |
ಹಬಕ್ಕೂಕನ ೨:14 |
ಹಬಕ್ಕೂಕನ ೨:15 |
ಹಬಕ್ಕೂಕನ ೨:16 |
ಹಬಕ್ಕೂಕನ ೨:17 |
ಹಬಕ್ಕೂಕನ ೨:18 |
ಹಬಕ್ಕೂಕನ ೨:19 |
ಹಬಕ್ಕೂಕನ ೨:20 |
|
|
|
|
|
|
ಹಬಕ್ಕೂಕನ 1 / ಹಬಕ್ಕ 1 |
ಹಬಕ್ಕೂಕನ 2 / ಹಬಕ್ಕ 2 |
ಹಬಕ್ಕೂಕನ 3 / ಹಬಕ್ಕ 3 |