೧ |
ಇಗೋ, ಸರ್ವೇಶ್ವರ ನೇಮಿಸಿದ ದಿನ ಬರುತ್ತಿದೆ. ಆಗ ಜೆರುಸಲೇಮಿನ ಆಸ್ತಿಪಾಸ್ತಿ ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ಅವರ ಕಣ್ಮುಂದೆ ಪಾಲುಪಾಲಾಗುವುದು. |
೨ |
ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು. |
೩ |
ಅನಂತರ ಪೂರ್ವಕಾಲದಲ್ಲಿ ನಡೆದಂತೆ, ಸರ್ವೇಶ್ವರ ಹೊರಟುಬಂದು ಆ ರಾಷ್ಟ್ರಗಳಿಗೆ ವಿರುದ್ಧವಾಗಿ ಪ್ರತಿಭಟಿಸುವರು. |
೪ |
ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು. |
೫ |
ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು. |
೬ |
ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು. |
೭ |
ಹಗಲಿರುಳು ಎನ್ನದೆ ನಿರಂತರವೂ ಬೆಳಕಾಗುವುದು. ಸಂಜೆಯು ಸಹ ಪ್ರಾಕಾಶಮಯವಾಗಿರುವುದು. ಆದರೆ ಇದು ಯಾವಾಗ ಸಂಭವಿಸುವುದೆಂಬುದು ಸರ್ವೇಶ್ವರಸ್ವಾಮಿಗೆ ಮಾತ್ರ ತಿಳಿದಿರುವುದು. |
೮ |
ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು. |
೯ |
ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು. |
೧೦ |
ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು. |
೧೧ |
ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು. |
೧೨ |
ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು. |
೧೩ |
ಸರ್ವೇಶ್ವರ ಆ ದಿನದಂದು ನಾಡಿನಲ್ಲಿ ಕೋಲಾಹಲವನ್ನೆಬ್ಬಿಸಲು, ಜನರು ಭಯಭೀತಿಗೆ ಒಳಗಾಗುವರು. ಒಬ್ಬರನ್ನೊಬ್ಬರು ತಡೆಹಿಡಿದು ಹೊಡೆದಾಡುವರು. |
೧೪ |
ಜುದೇಯವು ಜೆರುಸಲೇಮಿನ ಪರವಾಗಿ ಯುದ್ಧಮಾಡುವುದು. ಸುತ್ತಮುತ್ತಲಿನ ರಾಷ್ಟ್ರಗಳ ಆಸ್ತಿಯನ್ನೆಲ್ಲಾ - ಬೆಳ್ಳಿಬಂಗಾರ, ಬಟ್ಟೆಬರೆಗಳನ್ನೆಲ್ಲಾ - ರಾಶಿರಾಶಿಯಾಗಿ ದೋಚಿಕೊಳ್ಳಲಾಗುವುದು. |
೧೫ |
ನಾಡಿನ ಜನರಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮುಂತಾದ ಪಾಳೆಯದಲ್ಲಿನ ಎಲ್ಲ ಪಶುಪ್ರಾಣಿಗಳಿಗೂ ತಗಲುವುದು. |
೧೬ |
ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು. |
೧೭ |
ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು. |
೧೮ |
ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು. |
೧೯ |
ಈಜಿಪ್ಟಿಗೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ಸಕಲ ರಾಷ್ಟ್ರಗಳಿಗೂ ಸಂಭವಿಸುವ ದಂಡನೆ ಇದೇ. |
೨೦ |
ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು. |
೨೧ |
ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.
|
Kannada Bible (KNCL) 2016 |
No Data |
|
|
|
|
|
|
|
|
|
|
ಜೆಕರ್ಯನ ೧೪:1 |
ಜೆಕರ್ಯನ ೧೪:2 |
ಜೆಕರ್ಯನ ೧೪:3 |
ಜೆಕರ್ಯನ ೧೪:4 |
ಜೆಕರ್ಯನ ೧೪:5 |
ಜೆಕರ್ಯನ ೧೪:6 |
ಜೆಕರ್ಯನ ೧೪:7 |
ಜೆಕರ್ಯನ ೧೪:8 |
ಜೆಕರ್ಯನ ೧೪:9 |
ಜೆಕರ್ಯನ ೧೪:10 |
ಜೆಕರ್ಯನ ೧೪:11 |
ಜೆಕರ್ಯನ ೧೪:12 |
ಜೆಕರ್ಯನ ೧೪:13 |
ಜೆಕರ್ಯನ ೧೪:14 |
ಜೆಕರ್ಯನ ೧೪:15 |
ಜೆಕರ್ಯನ ೧೪:16 |
ಜೆಕರ್ಯನ ೧೪:17 |
ಜೆಕರ್ಯನ ೧೪:18 |
ಜೆಕರ್ಯನ ೧೪:19 |
ಜೆಕರ್ಯನ ೧೪:20 |
ಜೆಕರ್ಯನ ೧೪:21 |
|
|
|
|
|
|
ಜೆಕರ್ಯನ 1 / ಜೆಕರ 1 |
ಜೆಕರ್ಯನ 2 / ಜೆಕರ 2 |
ಜೆಕರ್ಯನ 3 / ಜೆಕರ 3 |
ಜೆಕರ್ಯನ 4 / ಜೆಕರ 4 |
ಜೆಕರ್ಯನ 5 / ಜೆಕರ 5 |
ಜೆಕರ್ಯನ 6 / ಜೆಕರ 6 |
ಜೆಕರ್ಯನ 7 / ಜೆಕರ 7 |
ಜೆಕರ್ಯನ 8 / ಜೆಕರ 8 |
ಜೆಕರ್ಯನ 9 / ಜೆಕರ 9 |
ಜೆಕರ್ಯನ 10 / ಜೆಕರ 10 |
ಜೆಕರ್ಯನ 11 / ಜೆಕರ 11 |
ಜೆಕರ್ಯನ 12 / ಜೆಕರ 12 |
ಜೆಕರ್ಯನ 13 / ಜೆಕರ 13 |
ಜೆಕರ್ಯನ 14 / ಜೆಕರ 14 |