೧ |
ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. |
೨ |
ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು. |
೩ |
ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ? |
೪ |
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ? |
೫ |
ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ? |
೬ |
ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ. |
೭ |
‘ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ. |
೮ |
ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು. |
೯ |
ಯೇಸುಸ್ವಾಮಿ ಅಲ್ಲಿಂದ ಹೊರಟು ಪ್ರಾರ್ಥನಾಮಂದಿರಕ್ಕೆ ಬಂದರು. |
೧೦ |
ಬತ್ತಿದ ಕೈಯುಳ್ಳ ಒಬ್ಬ ವ್ಯಕ್ತಿ ಅಲ್ಲಿದ್ದನು. ಯೇಸುವಿನ ಮೇಲೆ ತಪ್ಪುಹೊರಿಸುವ ಉದ್ದೇಶದಿಂದ ಕೆಲವರು, “ಸಬ್ಬತ್ ದಿನ ಸ್ವಸ್ಥಗೊಳಿಸುವುದು ಶಾಸ್ತ್ರಬದ್ಧವೇ?\ ಎಂದು ಯೇಸುವನ್ನು ಕೇಳಿದರು. |
೧೧ |
ಅದಕ್ಕೆ ಯೇಸು, “ನಿಮ್ಮಲ್ಲಿ ಒಬ್ಬನಿಗೆ ಒಂದೇ ಒಂದು ಕುರಿಯಿದೆ ಎನ್ನೋಣ. ಸಬ್ಬತ್ ದಿನ ಅದು ಗುಣಿಯಲ್ಲಿ ಬಿದ್ದುಹೋಯಿತು ಎನ್ನೋಣ; ಆ ದಿನ ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ? |
೧೨ |
ಕುರಿಗಿಂತ ನರಮಾನವ ಎಷ್ಟೋ ಮೌಲ್ಯವುಳ್ಳವನಲ್ಲವೇ? ಆದುದರಿಂದ ಸಬ್ಬತ್ ದಿನ ಸತ್ಕಾರ್ಯಮಾಡುವುದು ಶಾಸ್ತ್ರಬದ್ಧವಾದುದು,” ಎಂದರು. |
೧೩ |
ಅನಂತರ ಬತ್ತಿದ ಕೈಯುಳ್ಳವನನ್ನು ನೋಡಿ, “ಕೈಚಾಚು” ಎಂದರು. ಅವನು ಚಾಚಿದನು. ಅದು ಪುನಶ್ಚೇತನಗೊಂಡು ಇನ್ನೊಂದು ಕೈಯ ಹಾಗೆ ಸಂಪೂರ್ಣ ಸ್ವಸ್ಥವಾಯಿತು. |
೧೪ |
ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು. |
೧೫ |
ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು. |
೧೬ |
ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನು ಗುಣಪಡಿಸಿದರು ಮತ್ತು ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆಮಾಡಿದರು. |
೧೭ |
ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು: |
೧೮ |
“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು. |
೧೯ |
ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ. |
೨೦ |
ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು. |
೨೧ |
ನೆಮ್ಮುವರು ಅನ್ಯಜನರೆಲ್ಲರು ಇವನ ನಾಮವನು.” |
೨೨ |
ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು. |
೨೩ |
“ಇವರು ದಾವೀದನ ಕುಲಪುತ್ರರಾಗಿರಬಹುದೇ!’ ಎಂದುಕೊಂಡರು. |
೨೪ |
ಆದರೆ ಫರಿಸಾಯರು ಇದನ್ನು ಕೇಳಿದಾಗ, “ಇವನು ದೆವ್ವಗಳನ್ನು ಬಿಡಿಸುತ್ತಿರುವುದು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದಲೇ,” ಎಂದರು. |
೨೫ |
ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು. |
೨೬ |
ಸೈತಾನನು ಸೈತಾನನನ್ನು ಹೊಡೆದೋಡಿಸುವುದಾದರೆ, ಸೈತಾನನ ಪಕ್ಷದವರೇ ಪರಸ್ಪರ ವಿರೋಧಿಗಳಾಗುತ್ತಾರೆ. |
೨೭ |
ಆಗ ಅವನ ರಾಜ್ಯ ಹೇಗೆ ತಾನೇ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. |
೨೮ |
ನಾನು ದೇವರ ಆತ್ಮದಿಂದ ದೆವ್ವಗಳನ್ನು ಬಿಡಿಸುವುದಾದರೆ, ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ. |
೨೯ |
“ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು. |
೩೦ |
ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ. |
೩೧ |
“ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ. |
೩೨ |
ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು. |
೩೩ |
“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು. |
೩೪ |
ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ. |
೩೫ |
ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. |
೩೬ |
ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ. |
೩೭ |
ನಿನ್ನ ಮಾತುಗಳಿಂದಲೇ ನೀನು ನಿರಪರಾಧಿಯೆಂದು ನಿರ್ಧರಿಸಲಾಗುವುದು; ಅಥವಾ ಅಪರಾಧಿಯೆಂದು ಆಪಾದಿಸಲಾಗುವುದು,” ಎಂದರು. |
೩೮ |
ಬಳಿಕ ಕೆಲವುಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು. |
೩೯ |
ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. |
೪೦ |
ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು. |
೪೧ |
ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. |
೪೨ |
ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. |
೪೩ |
“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದಾಗ, ಅದು, ‘ನಾನು ಬಿಟ್ಟುಬಂದ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿಕೊಳ್ಳುತ್ತದೆ. |
೪೪ |
ಅದು ಮರಳಿ ಬಂದಾಗ, ಮನೆ ಬರಿದಾಗಿರುವುದನ್ನೂ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟ ಆಗಿರುವುದನ್ನೂ ಕಾಣುತ್ತದೆ. |
೪೫ |
ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು. |
೪೬ |
ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು. |
೪೭ |
“ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ,” ಎಂದು ಒಬ್ಬನು ತಿಳಿಸಿದನು. |
೪೮ |
ಅದಕ್ಕೆ ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈತೋರಿಸಿ, |
೪೯ |
ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು; |
50 |
ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.
|
Afrikaans Bible 1933/1953 |
© Bybelgenootskap van Suid-Afrika 1933, 1953. Gebruik met toestemming. Alle regte voorbehou |
|
|
|
|
|
|
|
|
|
|
ಮತ್ತಾಯನು ೧೨:1 |
ಮತ್ತಾಯನು ೧೨:2 |
ಮತ್ತಾಯನು ೧೨:3 |
ಮತ್ತಾಯನು ೧೨:4 |
ಮತ್ತಾಯನು ೧೨:5 |
ಮತ್ತಾಯನು ೧೨:6 |
ಮತ್ತಾಯನು ೧೨:7 |
ಮತ್ತಾಯನು ೧೨:8 |
ಮತ್ತಾಯನು ೧೨:9 |
ಮತ್ತಾಯನು ೧೨:10 |
ಮತ್ತಾಯನು ೧೨:11 |
ಮತ್ತಾಯನು ೧೨:12 |
ಮತ್ತಾಯನು ೧೨:13 |
ಮತ್ತಾಯನು ೧೨:14 |
ಮತ್ತಾಯನು ೧೨:15 |
ಮತ್ತಾಯನು ೧೨:16 |
ಮತ್ತಾಯನು ೧೨:17 |
ಮತ್ತಾಯನು ೧೨:18 |
ಮತ್ತಾಯನು ೧೨:19 |
ಮತ್ತಾಯನು ೧೨:20 |
ಮತ್ತಾಯನು ೧೨:21 |
ಮತ್ತಾಯನು ೧೨:22 |
ಮತ್ತಾಯನು ೧೨:23 |
ಮತ್ತಾಯನು ೧೨:24 |
ಮತ್ತಾಯನು ೧೨:25 |
ಮತ್ತಾಯನು ೧೨:26 |
ಮತ್ತಾಯನು ೧೨:27 |
ಮತ್ತಾಯನು ೧೨:28 |
ಮತ್ತಾಯನು ೧೨:29 |
ಮತ್ತಾಯನು ೧೨:30 |
ಮತ್ತಾಯನು ೧೨:31 |
ಮತ್ತಾಯನು ೧೨:32 |
ಮತ್ತಾಯನು ೧೨:33 |
ಮತ್ತಾಯನು ೧೨:34 |
ಮತ್ತಾಯನು ೧೨:35 |
ಮತ್ತಾಯನು ೧೨:36 |
ಮತ್ತಾಯನು ೧೨:37 |
ಮತ್ತಾಯನು ೧೨:38 |
ಮತ್ತಾಯನು ೧೨:39 |
ಮತ್ತಾಯನು ೧೨:40 |
ಮತ್ತಾಯನು ೧೨:41 |
ಮತ್ತಾಯನು ೧೨:42 |
ಮತ್ತಾಯನು ೧೨:43 |
ಮತ್ತಾಯನು ೧೨:44 |
ಮತ್ತಾಯನು ೧೨:45 |
ಮತ್ತಾಯನು ೧೨:46 |
ಮತ್ತಾಯನು ೧೨:47 |
ಮತ್ತಾಯನು ೧೨:48 |
ಮತ್ತಾಯನು ೧೨:49 |
ಮತ್ತಾಯನು ೧೨:50 |
|
|
|
|
|
|
ಮತ್ತಾಯನು 1 / Matt 1 |
ಮತ್ತಾಯನು 2 / Matt 2 |
ಮತ್ತಾಯನು 3 / Matt 3 |
ಮತ್ತಾಯನು 4 / Matt 4 |
ಮತ್ತಾಯನು 5 / Matt 5 |
ಮತ್ತಾಯನು 6 / Matt 6 |
ಮತ್ತಾಯನು 7 / Matt 7 |
ಮತ್ತಾಯನು 8 / Matt 8 |
ಮತ್ತಾಯನು 9 / Matt 9 |
ಮತ್ತಾಯನು 10 / Matt 10 |
ಮತ್ತಾಯನು 11 / Matt 11 |
ಮತ್ತಾಯನು 12 / Matt 12 |
ಮತ್ತಾಯನು 13 / Matt 13 |
ಮತ್ತಾಯನು 14 / Matt 14 |
ಮತ್ತಾಯನು 15 / Matt 15 |
ಮತ್ತಾಯನು 16 / Matt 16 |
ಮತ್ತಾಯನು 17 / Matt 17 |
ಮತ್ತಾಯನು 18 / Matt 18 |
ಮತ್ತಾಯನು 19 / Matt 19 |
ಮತ್ತಾಯನು 20 / Matt 20 |
ಮತ್ತಾಯನು 21 / Matt 21 |
ಮತ್ತಾಯನು 22 / Matt 22 |
ಮತ್ತಾಯನು 23 / Matt 23 |
ಮತ್ತಾಯನು 24 / Matt 24 |
ಮತ್ತಾಯನು 25 / Matt 25 |
ಮತ್ತಾಯನು 26 / Matt 26 |
ಮತ್ತಾಯನು 27 / Matt 27 |
ಮತ್ತಾಯನು 28 / Matt 28 |