೧ |
ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ. |
೨ |
ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು. |
೩ |
ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ. |
೪ |
ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ. |
೫ |
ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ. |
೬ |
ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ. |
೭ |
ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡು ಒಯ್ಯುವುದಿಲ್ಲ. |
೮ |
ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು. |
೯ |
ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ. |
೧೦ |
ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ. |
೧೧ |
ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು. |
೧೨ |
ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ. |
೧೩ |
ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ: |
೧೪ |
ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು: |
೧೫ |
ಸೂಕ್ತಕಾಲದಲ್ಲಿ ಕ್ರಿಸ್ತಯೇಸುವನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವರು ಪರಮಾನಂದನು ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್. |
೧೬ |
*** |
೧೭ |
ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು. |
೧೮ |
ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು. |
೧೯ |
ಹೀಗೆ, ಅವರು ತಮ್ಮ ಭವಿಷ್ಯಜೀವನಕ್ಕೆ ಭದ್ರವಾದ ಬುನಾದಿಯಾಗಬಲ್ಲ ನಿಧಿಯನ್ನು ಕೂಡಿಸಿಕೊಳ್ಳಬೇಕೆಂದು ವಿಧಿಸು. ಆಗ ಅವರು ಶಾಶ್ವತ ಜೀವವನ್ನು ಪಡೆಯುವರು. |
೨೦ |
ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು. |
೨೧ |
ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!
|
Kannada Bible (KNCL) 2016 |
No Data |
|
|
|
|
|
|
|
|
|
|
ತಿಮೊಥೇಯನಿಗ ೧ ೬:1 |
ತಿಮೊಥೇಯನಿಗ ೧ ೬:2 |
ತಿಮೊಥೇಯನಿಗ ೧ ೬:3 |
ತಿಮೊಥೇಯನಿಗ ೧ ೬:4 |
ತಿಮೊಥೇಯನಿಗ ೧ ೬:5 |
ತಿಮೊಥೇಯನಿಗ ೧ ೬:6 |
ತಿಮೊಥೇಯನಿಗ ೧ ೬:7 |
ತಿಮೊಥೇಯನಿಗ ೧ ೬:8 |
ತಿಮೊಥೇಯನಿಗ ೧ ೬:9 |
ತಿಮೊಥೇಯನಿಗ ೧ ೬:10 |
ತಿಮೊಥೇಯನಿಗ ೧ ೬:11 |
ತಿಮೊಥೇಯನಿಗ ೧ ೬:12 |
ತಿಮೊಥೇಯನಿಗ ೧ ೬:13 |
ತಿಮೊಥೇಯನಿಗ ೧ ೬:14 |
ತಿಮೊಥೇಯನಿಗ ೧ ೬:15 |
ತಿಮೊಥೇಯನಿಗ ೧ ೬:16 |
ತಿಮೊಥೇಯನಿಗ ೧ ೬:17 |
ತಿಮೊಥೇಯನಿಗ ೧ ೬:18 |
ತಿಮೊಥೇಯನಿಗ ೧ ೬:19 |
ತಿಮೊಥೇಯನಿಗ ೧ ೬:20 |
ತಿಮೊಥೇಯನಿಗ ೧ ೬:21 |
|
|
|
|
|
|
ತಿಮೊಥೇಯನಿಗ ೧ 1 / ತಿಮ೧ 1 |
ತಿಮೊಥೇಯನಿಗ ೧ 2 / ತಿಮ೧ 2 |
ತಿಮೊಥೇಯನಿಗ ೧ 3 / ತಿಮ೧ 3 |
ತಿಮೊಥೇಯನಿಗ ೧ 4 / ತಿಮ೧ 4 |
ತಿಮೊಥೇಯನಿಗ ೧ 5 / ತಿಮ೧ 5 |
ತಿಮೊಥೇಯನಿಗ ೧ 6 / ತಿಮ೧ 6 |