೧ |
ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು. |
೨ |
ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ. |
೩ |
ಇವು ನಿಮ್ಮ ವಿಶ್ವಾಸವನ್ನು ಒರೆಗೆ ಹಚ್ಚಿ ನಿಮ್ಮನ್ನು ದೃಢಪಡಿಸುತ್ತವೆ; ನಿಮ್ಮನ್ನು ಸಹನಶೀಲರನ್ನಾಗಿ ಮಾಡುತ್ತವೆ. |
೪ |
ಈ ಸಹನೆ ಸಿದ್ಧಿಗೆ ಬಂದಾಗ ನೀವು ಯಾವ ಕುಂದುಕೊರತೆ ಇಲ್ಲದೆ, ಪರಿಪೂರ್ಣರೂ ಸರ್ವಗುಣ ಸಂಪನ್ನರೂ ಆಗುತ್ತೀರಿ. |
೫ |
ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ. |
೬ |
ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ. |
೭ |
ಅಂಥವನು ಚಂಚಲಚಿತ್ತನು. ಆಚಾರವಿಚಾರಗಳಲ್ಲಿ ಅಸ್ಥಿರ ಮನಸ್ಸುಳ್ಳವನು. ಆದ್ದರಿಂದ ಅವನು ಪ್ರಭುವಿನಿಂದ ಏನನ್ನಾದರೂ ಪಡೆಯುತ್ತೇನೆಂದು ಭಾವಿಸದಿರಲಿ. |
೮ |
*** |
೯ |
ದೀನದಲಿತನಾದ ಸಹೋದರನು, ದೇವರು ತನ್ನನ್ನು ಉನ್ನತ ಸ್ಥಿತಿಗೆ ಏರಿಸಿದಾಗ ಆನಂದಿಸಲಿ. |
೧೦ |
ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ. |
೧೧ |
ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ. |
೧೨ |
ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ. |
೧೩ |
ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ. |
೧೪ |
ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ. |
೧೫ |
ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ. |
೧೬ |
ಪ್ರಿಯ ಸಹೋದರರೇ, ಮೋಸಹೋಗಬೇಡಿ. |
೧೭ |
ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ. |
೧೮ |
ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು. |
೧೯ |
ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ. |
೨೦ |
ಮಾನವನ ಕೋಪ ದೇವನೀತಿಗೆ ಧಕ್ಕೆ! ಆದುದರಿಂದ ನಿಮ್ಮಲ್ಲಿರುವ ಎಲ್ಲ ನೀಚತನವನ್ನು ಮತ್ತು ಬೆಳೆಯುತ್ತಿರುವ ದುಷ್ಟತನವನ್ನು ಕಿತ್ತೊಗೆಯಿರಿ. ನಿಮ್ಮ ಹೃದಯದಲ್ಲಿ ದೇವರು ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಧಾರಮಾಡಬಲ್ಲದು. |
೨೧ |
*** |
೨೨ |
ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ. |
೨೩ |
ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿ, |
೨೪ |
ಮರುಕ್ಷಣವೇ ತಾನು ಹೇಗಿದ್ದೇನೆಂದು ಮರೆತುಬಿಡುವವನಿಗೆ ಸಮಾನನು. |
೨೫ |
ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು! |
೨೬ |
ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ. |
೨೭ |
ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.
|
Kannada Bible (KNCL) 2016 |
No Data |
|
|
|
|
|
|
|
|
|
|
ಯಕೋಬನು ೧:1 |
ಯಕೋಬನು ೧:2 |
ಯಕೋಬನು ೧:3 |
ಯಕೋಬನು ೧:4 |
ಯಕೋಬನು ೧:5 |
ಯಕೋಬನು ೧:6 |
ಯಕೋಬನು ೧:7 |
ಯಕೋಬನು ೧:8 |
ಯಕೋಬನು ೧:9 |
ಯಕೋಬನು ೧:10 |
ಯಕೋಬನು ೧:11 |
ಯಕೋಬನು ೧:12 |
ಯಕೋಬನು ೧:13 |
ಯಕೋಬನು ೧:14 |
ಯಕೋಬನು ೧:15 |
ಯಕೋಬನು ೧:16 |
ಯಕೋಬನು ೧:17 |
ಯಕೋಬನು ೧:18 |
ಯಕೋಬನು ೧:19 |
ಯಕೋಬನು ೧:20 |
ಯಕೋಬನು ೧:21 |
ಯಕೋಬನು ೧:22 |
ಯಕೋಬನು ೧:23 |
ಯಕೋಬನು ೧:24 |
ಯಕೋಬನು ೧:25 |
ಯಕೋಬನು ೧:26 |
ಯಕೋಬನು ೧:27 |
|
|
|
|
|
|
ಯಕೋಬನು 1 / ಯ 1 |
ಯಕೋಬನು 2 / ಯ 2 |
ಯಕೋಬನು 3 / ಯ 3 |
ಯಕೋಬನು 4 / ಯ 4 |
ಯಕೋಬನು 5 / ಯ 5 |