೧ |
ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ |
೨ |
ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು: |
೩ |
ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು. |
೪ |
ತಾವು ಮೋಶೆಯ ಮೂಲಕ ಇವರ ಪೂರ್ವಜರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಯೇಲರು ಕೈಗೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕಾಗಿ ಸರ್ವೇಶ್ವರ ಅವರನ್ನು ಉಳಿಸಿದರು. |
೫ |
ಇಸ್ರಯೇಲರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ |
೬ |
ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಪೂಜಿಸಿದರು. |
೭ |
ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು. |
೮ |
ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು. |
೯ |
ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್. |
೧೦ |
ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು. |
೧೧ |
ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು. |
೧೨ |
ಇಸ್ರಯೇಲರು ಮತ್ತೆ ಸರ್ವೆಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ಮೋವಾಬ್ಯರ ಅರಸ ಎಗ್ಲೋನನನ್ನು ಇಸ್ರಯೇಲರಿಗೆ ವಿರುದ್ಧ ಸರ್ವೇಶ್ವರ ಬಲಪಡಿಸಿದರು. |
೧೩ |
ಎಗ್ಲೋನನು ಅಮ್ಮೋನಿಯರನ್ನೂ ಅಮಾಲೇಕ್ಯರನ್ನೂ ಕೂಡಿಸಿಕೊಂಡು ಬಂದು ಇಸ್ರಯೇಲರನ್ನು ಸೋಲಿಸಿ ಖರ್ಜೂರ ನಗರವನ್ನು ಗೆದ್ದುಕೊಂಡನು. |
೧೪ |
ಹದಿನೆಂಟು ವರ್ಷಕಾಲ ಇಸ್ರಯೇಲರು ಅವನಿಗೆ ಗುಲಾಮರಾಗಿದ್ದರು. |
೧೫ |
ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು. |
೧೬ |
ಅವನು ತನಗಾಗಿ ಒಂದುವರೆ ಅಡಿ ಉದ್ದವಾದ ಇಬ್ಬಾಯಿ ಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ, ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋದನು. |
೧೭ |
ಮೋವಾಬ್ಯರ ಅರಸ ಎಗ್ಲೋನನಿಗೆ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ. |
೧೮ |
ಏಹೂದನು ಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತು ತಂದ ಆಳುಗಳನ್ನು ಕಳುಹಿಸಿಬಿಟ್ಟನು. |
೧೯ |
ತಾನಾದರೋ ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದವರೆಗೆ ಹೋಗಿ, ಹಿಂದಿರುಗಿ ಎಗ್ಲೋನನ ಬಳಿಗೆ ಬಂದನು; “ಅರಸರೇ, ತಮಗೆ ತಿಳಿಸಬೇಕಾದ ಒಂದು ರಹಸ್ಯ ವಿಷಯವಿದೆ,” ಎಂದನು. ಆಗ ಅರಸ, “ನಿಶ್ಯಬ್ದ” ಎಂದನು. ಅವನ ಸೇವಕರೆಲ್ಲರು ಅಲ್ಲಿಂದ ಹೊರಗೆ ಹೋದರು. |
೨೦ |
ಅರಸನು ತನ್ನ ತಂಪಾದ ಮೇಲುಪ್ಪರಿಗೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಬಂದನು; “ನಿಮಗೆ ತಿಳಿಸಬೇಕಾದ ಒಂದು ದೈವೋಕ್ತಿ ಇದೆ,” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದು ನಿಂತನು. |
೨೧ |
ಆಗ ಏಹೂದನು ಎಡಗೈ ಚಾಚಿ, ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯನ್ನು ತಿವಿದನು. |
೨೨ |
ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯನ್ನು ಹೊಕ್ಕಿತು. ಏಹೂದನು ಕತ್ತಿಯನ್ನು ಹೊರಗೆ ತೆಗೆಯಲಿಲ್ಲ. ಬೊಜ್ಜು ಅದನ್ನು ಮುಚ್ಚಿಕೊಂಡಿತ್ತು. ಮಲ ಹೊರಗೆ ಬಂದಿತು. |
೨೩ |
ಏಹೂದನು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ, ಅಗುಳಿ ಹಾಕಿ ಪಡಸಾಲೆಯ ಮೂಲಕ ಹೊರಟು ಹೋದನು. |
೨೪ |
ತರುವಾಯ ಸೇವಕರು ಅಲ್ಲಿಗೆ ಬಂದು ಬಾಗಿಲಿಗೆ ಅಗುಳಿ ಹಾಕಿರುವುದನ್ನು ಕಂಡು, “ಅರಸ ತಂಪಾದ ಕೊಠಡಿಗೆ ಸೇರಿದ ಪಾಯಖಾನೆಗೆ ಹೋಗಿರಬೇಕೆಂದು, |
೨೫ |
ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಅರಸ ಕದಗಳನ್ನು ತೆರೆಯದೆ ಇರುವುದನ್ನು ನೋಡಿ ಬೀಗದ ಕೈಯಿಂದ ತಾವೇ ಬಾಗಿಲು ತೆರೆದರು. ಇಗೋ, ಅವರ ಒಡೆಯ ನೆಲದ ಮೇಲೆ ಸತ್ತುಬಿದ್ದಿದ್ದನು! |
೨೬ |
ಅವರು ಕಾಯ್ದಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ನದಿ ದಾಟಿ |
೨೭ |
ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು. |
೨೮ |
ಏಹೂದನು ಅವರಿಗೆ ನಾಯಕನಾಗಿ, “ನನ್ನನ್ನು ಹಿಂಬಾಲಿಸಿ ಬನ್ನಿ; ಸರ್ವೇಶ್ವರ ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೊಪ್ಪಿಸಿದ್ದಾರೆ,” ಎಂದನು. ಅಂತೆಯೇ ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲ ಹಿಡಿದುಕೊಂಡು ಯಾರನ್ನೂ ದಾಟಗೊಡಲಿಲ್ಲ. |
೨೯ |
ಅಂದು ಅವರು ಸುಮಾರು ಹತ್ತು ಸಾವಿರಮಂದಿ, ಪುಷ್ಠ ಹಾಗು ಪರಾಕ್ರಮಿಗಳಾದ ಮೋವಾಬ್ಯರನ್ನು ಸದೆಬಡಿದರು. ಒಬ್ಬನೂ ತಪ್ಪಿಸಿಕೊಳ್ಳಲಾಗಲಿಲ್ಲ. |
೩೦ |
ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು. |
೩೧ |
ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು. |
Kannada Bible (KNCL) 2016 |
No Data |
ನ್ಯಾಯಸ್ಥಾಪಕರು ೩:1 |
ನ್ಯಾಯಸ್ಥಾಪಕರು ೩:2 |
ನ್ಯಾಯಸ್ಥಾಪಕರು ೩:3 |
ನ್ಯಾಯಸ್ಥಾಪಕರು ೩:4 |
ನ್ಯಾಯಸ್ಥಾಪಕರು ೩:5 |
ನ್ಯಾಯಸ್ಥಾಪಕರು ೩:6 |
ನ್ಯಾಯಸ್ಥಾಪಕರು ೩:7 |
ನ್ಯಾಯಸ್ಥಾಪಕರು ೩:8 |
ನ್ಯಾಯಸ್ಥಾಪಕರು ೩:9 |
ನ್ಯಾಯಸ್ಥಾಪಕರು ೩:10 |
ನ್ಯಾಯಸ್ಥಾಪಕರು ೩:11 |
ನ್ಯಾಯಸ್ಥಾಪಕರು ೩:12 |
ನ್ಯಾಯಸ್ಥಾಪಕರು ೩:13 |
ನ್ಯಾಯಸ್ಥಾಪಕರು ೩:14 |
ನ್ಯಾಯಸ್ಥಾಪಕರು ೩:15 |
ನ್ಯಾಯಸ್ಥಾಪಕರು ೩:16 |
ನ್ಯಾಯಸ್ಥಾಪಕರು ೩:17 |
ನ್ಯಾಯಸ್ಥಾಪಕರು ೩:18 |
ನ್ಯಾಯಸ್ಥಾಪಕರು ೩:19 |
ನ್ಯಾಯಸ್ಥಾಪಕರು ೩:20 |
ನ್ಯಾಯಸ್ಥಾಪಕರು ೩:21 |
ನ್ಯಾಯಸ್ಥಾಪಕರು ೩:22 |
ನ್ಯಾಯಸ್ಥಾಪಕರು ೩:23 |
ನ್ಯಾಯಸ್ಥಾಪಕರು ೩:24 |
ನ್ಯಾಯಸ್ಥಾಪಕರು ೩:25 |
ನ್ಯಾಯಸ್ಥಾಪಕರು ೩:26 |
ನ್ಯಾಯಸ್ಥಾಪಕರು ೩:27 |
ನ್ಯಾಯಸ್ಥಾಪಕರು ೩:28 |
ನ್ಯಾಯಸ್ಥಾಪಕರು ೩:29 |
ನ್ಯಾಯಸ್ಥಾಪಕರು ೩:30 |
ನ್ಯಾಯಸ್ಥಾಪಕರು ೩:31 |
ನ್ಯಾಯಸ್ಥಾಪಕರು 1 / ನ್ಯಾಯ 1 |
ನ್ಯಾಯಸ್ಥಾಪಕರು 2 / ನ್ಯಾಯ 2 |
ನ್ಯಾಯಸ್ಥಾಪಕರು 3 / ನ್ಯಾಯ 3 |
ನ್ಯಾಯಸ್ಥಾಪಕರು 4 / ನ್ಯಾಯ 4 |
ನ್ಯಾಯಸ್ಥಾಪಕರು 5 / ನ್ಯಾಯ 5 |
ನ್ಯಾಯಸ್ಥಾಪಕರು 6 / ನ್ಯಾಯ 6 |
ನ್ಯಾಯಸ್ಥಾಪಕರು 7 / ನ್ಯಾಯ 7 |
ನ್ಯಾಯಸ್ಥಾಪಕರು 8 / ನ್ಯಾಯ 8 |
ನ್ಯಾಯಸ್ಥಾಪಕರು 9 / ನ್ಯಾಯ 9 |
ನ್ಯಾಯಸ್ಥಾಪಕರು 10 / ನ್ಯಾಯ 10 |
ನ್ಯಾಯಸ್ಥಾಪಕರು 11 / ನ್ಯಾಯ 11 |
ನ್ಯಾಯಸ್ಥಾಪಕರು 12 / ನ್ಯಾಯ 12 |
ನ್ಯಾಯಸ್ಥಾಪಕರು 13 / ನ್ಯಾಯ 13 |
ನ್ಯಾಯಸ್ಥಾಪಕರು 14 / ನ್ಯಾಯ 14 |
ನ್ಯಾಯಸ್ಥಾಪಕರು 15 / ನ್ಯಾಯ 15 |
ನ್ಯಾಯಸ್ಥಾಪಕರು 16 / ನ್ಯಾಯ 16 |
ನ್ಯಾಯಸ್ಥಾಪಕರು 17 / ನ್ಯಾಯ 17 |
ನ್ಯಾಯಸ್ಥಾಪಕರು 18 / ನ್ಯಾಯ 18 |
ನ್ಯಾಯಸ್ಥಾಪಕರು 19 / ನ್ಯಾಯ 19 |
ನ್ಯಾಯಸ್ಥಾಪಕರು 20 / ನ್ಯಾಯ 20 |
ನ್ಯಾಯಸ್ಥಾಪಕರು 21 / ನ್ಯಾಯ 21 |
|
|
|
|
|