ಮತ್ತಾಯನು ೫:೬ |
ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.
|
ಮತ್ತಾಯನು ೫:೧೦ |
ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”
|
ಮತ್ತಾಯನು ೫:೧೧ |
“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.
|
ಮತ್ತಾಯನು ೫:೨೧ |
“ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
|
ಮತ್ತಾಯನು ೫:೨೨ |
ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.
|
ಮತ್ತಾಯನು ೫:೨೫ |
“ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!
|
ಮತ್ತಾಯನು ೧೦:೧೭ |
ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.
|
ಮತ್ತಾಯನು ೧೨:೨೦ |
ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.
|
ಮತ್ತಾಯನು ೧೯:೨೮ |
ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.
|
ಮತ್ತಾಯನು ೨೦:೪ |
ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.
|
ಮತ್ತಾಯನು ೨೦:೧೩ |
ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?
|
ಮತ್ತಾಯನು ೨೩:೨೩ |
ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.
|
ಮತ್ತಾಯನು ೨೬:೫೯ |
ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.
|
ಮತ್ತಾಯನು ೨೭:೧೯ |
ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.
|
ಮಾರ್ಕನು ೬:೧೮ |
ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು.
|
ಮಾರ್ಕನು ೧೩:೯ |
“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.
|
ಮಾರ್ಕನು ೧೩:೧೧ |
ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.
|
ಮಾರ್ಕನು ೧೪:೫೫ |
ಇತ್ತ ಮುಖ್ಯಯಾಜಕರು ಮತ್ತು ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಅವರ ವಿರುದ್ಧ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
|
ಮಾರ್ಕನು ೧೫:೧ |
ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.
|
ಮಾರ್ಕನು ೧೫:೪೩ |
ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.
|
ಲೂಕನು ೧೧:೪೨ |
“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.
|
ಲೂಕನು ೧೨:೧೧ |
“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.
|
ಲೂಕನು ೧೨:೧೪ |
ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.
|
ಲೂಕನು ೧೨:೫೭ |
“ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?
|
ಲೂಕನು ೧೨:೫೮ |
ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.
|
ಲೂಕನು ೧೮:೨ |
“ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.
|
ಲೂಕನು ೧೮:೩ |
ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿ ಅನ್ಯಾಯಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ,’ ಎಂದು ಕೇಳಿಕೊಳ್ಳುತ್ತಿದ್ದಳು.
|
ಲೂಕನು ೧೮:೪ |
ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;
|
ಲೂಕನು ೧೮:೫ |
ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.”
|
ಲೂಕನು ೧೮:೬ |
ಅನಂತರ ಪ್ರಭು ಯೇಸು, “ಈ ನೀತಿಕೆಟ್ಟ ನ್ಯಾಯಾದೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೆ?
|
ಲೂಕನು ೧೮:೭ |
ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?
|
ಲೂಕನು ೧೮:೮ |
ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.
|
ಲೂಕನು ೧೮:೧೧ |
ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.
|
ಲೂಕನು ೨೦:೨೦ |
ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.
|
ಲೂಕನು ೨೦:೨೧ |
“ಬೋಧಕರೇ, ನೀವು ಹೇಳುವುದು ಹಾಗೂ ಬೋಧಿಸುವುದು ನ್ಯಾಯಬಧ್ಧವಾಗಿಯೇ ಇದೆ. ಮುಖದಾಕ್ಷಿಣ್ಯವಿಲ್ಲದೆ ಸತ್ಯಕ್ಕನುಸಾರವಾಗಿ ಧರ್ಮಮಾರ್ಗವನ್ನು ಬೋಧಿಸುತ್ತೀರಿ. ಇದನ್ನು ನಾವು ಚೆನ್ನಾಗಿ ಬಲ್ಲೆವು.
|
ಲೂಕನು ೨೨:೩೦ |
ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.
|
ಲೂಕನು ೨೨:೬೬ |
ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.
|
ಲೂಕನು ೨೩:೪೧ |
ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.
|
ಲೂಕನು ೨೩:೫೦ |
ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ.
|
ಯೊವಾನ್ನನು ೫:೩೦ |
“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.
|
ಯೊವಾನ್ನನು ೭:೨೪ |
ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.
|
ಯೊವಾನ್ನನು ೧೧:೪೭ |
ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;
|
ಯೊವಾನ್ನನು ೧೨:೩೧ |
ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.
|
ಯೊವಾನ್ನನು ೧೬:೮ |
ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.
|
ಯೊವಾನ್ನನು ೧೬:೧೦ |
ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ.
|
ಯೊವಾನ್ನನು ೧೬:೧೧ |
ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.
|
ಯೊವಾನ್ನನು ೧೯:೧೩ |
ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.
|
ಪ್ರೇಷಿತರ ೫:೨೧ |
ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.
|
ಪ್ರೇಷಿತರ ೫:೨೨ |
ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು;
|
ಪ್ರೇಷಿತರ ೫:೨೭ |
ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನಯಾಜಕನು ಅವರನ್ನು ಉದ್ದೇಶಿಸಿ,
|
ಪ್ರೇಷಿತರ ೫:೪೧ |
ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.
|
ಪ್ರೇಷಿತರ ೬:೧೨ |
ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.
|
ಪ್ರೇಷಿತರ ೬:೧೫ |
ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.
|
ಪ್ರೇಷಿತರ ೭:೨೪ |
ಆಗ ಅವರಲ್ಲಿ ಒಬ್ಬನು ಈಜಿಪ್ಟಿನವನಿಂದ ಅನ್ಯಾಯವಾಗಿ ಹಿಂಸೆಪಡುತ್ತಿರುವುದನ್ನು ಕಂಡನು. ಅವನ ಸಹಾಯಕ್ಕೆ ಹೋಗಿ ಈಜಿಪ್ಟಿನವನನ್ನು ಕೊಂದು ಸೇಡುತೀರಿಸಿದನು.
|
ಪ್ರೇಷಿತರ ೭:೨೭ |
ಆಗ ಆಕ್ರಮಣ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ನ್ಯಾಯತೀರಿಸಲು ನಿನಗೆ ಅಧಿಕಾರವನ್ನು ಕೊಟ್ಟವರು ಯಾರು?
|
ಪ್ರೇಷಿತರ ೭:೩೫ |
“ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.
|
ಪ್ರೇಷಿತರ ೭:೫೪ |
ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.
|
ಪ್ರೇಷಿತರ ೭:೫೭ |
ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು.
|
ಪ್ರೇಷಿತರ ೮:೩೩ |
ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”
|
ಪ್ರೇಷಿತರ ೧೦:೪೨ |
ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.
|
ಪ್ರೇಷಿತರ ೧೩:೨೦ |
ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು.
|
ಪ್ರೇಷಿತರ ೧೬:೧೯ |
ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
|
ಪ್ರೇಷಿತರ ೧೬:೨೦ |
ಅಲ್ಲಿದ್ದ ರೋಮಿನ ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.
|
ಪ್ರೇಷಿತರ ೧೬:೨೨ |
ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು.
|
ಪ್ರೇಷಿತರ ೧೬:೩೫ |
ಮಾರನೆಯ ಬೆಳಿಗ್ಗೆ ನ್ಯಾಯಾಧಿಪತಿಗಳು ಜವಾನರ ಮುಖಾಂತರ, “ಈ ವ್ಯಕ್ತಿಗಳನ್ನು ಬಿಟ್ಟುಬಿಡು,” ಎಂದು ಹೇಳಿಕಳುಹಿಸಿದರು.
|
ಪ್ರೇಷಿತರ ೧೬:೩೬ |
ಸೆರೆಮನೆಯ ಅಧಿಕಾರಿ ಪೌಲನ ಬಳಿಗೆ ಬಂದು, “ನ್ಯಾಯಾಧಿಪತಿಗಳು ನಿಮ್ಮನ್ನು ಬಿಡುಗಡೆಮಾಡುವಂತೆ ಹೇಳಿಕಳುಹಿಸಿದ್ದಾರೆ; ನೀವು ನೆಮ್ಮದಿಯಿಂದ ಹೊರಟುಹೋಗಬಹುದು,” ಎಂದು ವರದಿಮಾಡಿದನು.
|
ಪ್ರೇಷಿತರ ೧೬:೩೭ |
ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.
|
ಪ್ರೇಷಿತರ ೧೬:೩೮ |
ಜವಾನರು ಈ ಮಾತುಗಳನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಅವರು ಪೌಲ ಮತ್ತು ಸೀಲ ರೋಮಿನ ಪೌರರೆಂದು ಕೇಳಿ ಭಯಪಟ್ಟರು.
|
ಪ್ರೇಷಿತರ ೧೭:೩೧ |
ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”
|
ಪ್ರೇಷಿತರ ೧೮:೧೨ |
ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.
|
ಪ್ರೇಷಿತರ ೧೮:೧೪ |
ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.
|
ಪ್ರೇಷಿತರ ೧೮:೧೬ |
ಅವರನ್ನು ನ್ಯಾಯಸ್ಥಾನದಿಂದ ಹೊರಗಟ್ಟಿದನು.
|
ಪ್ರೇಷಿತರ ೧೮:೧೭ |
ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.
|
ಪ್ರೇಷಿತರ ೧೯:೩೮ |
ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.
|
ಪ್ರೇಷಿತರ ೨೨:೨೫ |
ಹೊಡೆಯುವುದಕ್ಕಾಗಿ ಅವನನ್ನು ಬಾರುಗಳಿಂದ ಕಟ್ಟುತ್ತಿದ್ದಾಗ ಪೌಲನು, ಹತ್ತಿರವೇ ನಿಂತಿದ್ದ ಶತಾಧಿಪತಿಯನ್ನು ನೋಡಿ, “ರೋಮಿನ ಪೌರನನ್ನು ಚಾವಟಿಯಿಂದ ಹೊಡೆಯುವುದು, ಅದೂ ವಿಚಾರಣೆಮಾಡದೆ ಹೊಡೆಯಿಸುವುದು, ನ್ಯಾಯಸಮ್ಮತವೋ?” ಎಂದು ಕೇಳಿದನು.
|
ಪ್ರೇಷಿತರ ೨೨:೩೦ |
ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.
|
ಪ್ರೇಷಿತರ ೨೩:೧ |
ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.
|
ಪ್ರೇಷಿತರ ೨೩:೩ |
ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.
|
ಪ್ರೇಷಿತರ ೨೩:೨೦ |
ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.
|
ಪ್ರೇಷಿತರ ೨೩:೨೮ |
ಇವನ ಮೇಲೆ ಅವರು ಹೊರಿಸಿರುವ ಆಪಾದನೆಗಳು ಏನೆಂದು ತಿಳಿದುಕೊಳ್ಳುವ ಉದ್ದೇಶದಿಂದ ನಾನು ಇವನನ್ನು ಅವರ ನ್ಯಾಯಸಭೆಯಲ್ಲಿ ಹಾಜರುಪಡಿಸಿದೆ.
|
ಪ್ರೇಷಿತರ ೨೪:೧೦ |
ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.
|
ಪ್ರೇಷಿತರ ೨೪:೨೦ |
ಅಥವಾ, ನಾನು ನ್ಯಾಯಸಭೆಯ ಮುಂದೆ ನಿಂತಿದ್ದಾಗ ನನ್ನಲ್ಲಿ ಯಾವ ಅಪರಾಧಗಳು ಕಂಡುಬಂದವೆಂದು, ಈ ಜನರೇ ಹೇಳಲಿ.
|
ಪ್ರೇಷಿತರ ೨೫:೬ |
ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು.
|
ಪ್ರೇಷಿತರ ೨೫:೧೦ |
ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.
|
ಪ್ರೇಷಿತರ ೨೫:೧೭ |
ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.
|
ರೋಮನರಿಗೆ ೧:೨೯ |
ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.
|
ರೋಮನರಿಗೆ ೨:೨ |
ಇಂಥ ಅಪರಾಧಗಳನ್ನು ಮಾಡುವವರ ಬಗ್ಗೆ ದೇವರು ನೀಡುವ ತೀರ್ಪು ನ್ಯಾಯಬದ್ಧವಾದುದು ಎಂಬುದನ್ನು ನಾವು ಬಲ್ಲೆವು.
|
ರೋಮನರಿಗೆ ೨:೩ |
ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ?
|
ರೋಮನರಿಗೆ ೨:೫ |
ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.
|
ರೋಮನರಿಗೆ ೩:೫ |
ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)
|
ರೋಮನರಿಗೆ ೩:೬ |
ಎಂದಿಗೂ ಇಲ್ಲ! ದೇವರು ನ್ಯಾಯವಂತರಲ್ಲದಿದ್ದರೆ ಲೋಕಕ್ಕೆ ನ್ಯಾಯತೀರ್ಪು ಕೊಡಲು ಹೇಗೆ ತಾನೆ ಸಾಧ್ಯ?
|
ರೋಮನರಿಗೆ ೩:೮ |
“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
|
ರೋಮನರಿಗೆ ೩:೧೯ |
ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.
|
ರೋಮನರಿಗೆ ೩:೨೬ |
ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.
|
ರೋಮನರಿಗೆ ೭:೧೨ |
ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.
|
ರೋಮನರಿಗೆ ೯:೧೪ |
ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.
|
ರೋಮನರಿಗೆ ೧೪:೧೦ |
ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?
|
ಕೊರಿಂಥಿಯರಿಗೆ ೧ ೪:೩ |
ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.
|
ಕೊರಿಂಥಿಯರಿಗೆ ೧ ೪:೪ |
ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.
|
ಕೊರಿಂಥಿಯರಿಗೆ ೧ ೬:೧ |
ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು?
|
ಕೊರಿಂಥಿಯರಿಗೆ ೧ ೬:೨ |
ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?
|
ಕೊರಿಂಥಿಯರಿಗೆ ೧ ೬:೩ |
ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ? ಹೀಗಿರುವಲ್ಲಿ, ಈ ಜೀವನದ ಸಮಸ್ಯೆಗಳನ್ನು ಕುರಿತು ನ್ಯಾಯತೀರ್ಪು ಮಾಡುವುದು ಎಷ್ಟೋ ಸುಲಭವಲ್ಲವೇ?
|
ಕೊರಿಂಥಿಯರಿಗೆ ೧ ೬:೪ |
ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ?
|
ಕೊರಿಂಥಿಯರಿಗೆ ೧ ೬:೬ |
ಸಹೋದರನು ಸಹೋದರನ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು, ಅದೂ ಅವಿಶ್ವಾಸಿಗಳ ಮುಂದೆ ಹೋಗುವುದು ಸರಿಯೇ?
|
ಕೊರಿಂಥಿಯರಿಗೆ ೧ ೬:೭ |
ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ?
|
ಕೊರಿಂಥಿಯರಿಗೆ ೧ ೬:೮ |
ಅದಕ್ಕೆ ಬದಲು ನೀವೇ ಅನ್ಯಾಯಮಾಡುತ್ತೀರಿ; ನೀವೇ ಸುಲಿಗೆಮಾಡುತ್ತೀರಿ; ಅದೂ ಸಹೋದರರಿಗೆ ಹೀಗೆ ಮಾಡುತ್ತೀರಿ;
|
ಕೊರಿಂಥಿಯರಿಗೆ ೧ ೧೧:೨೯ |
ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.
|
ಕೊರಿಂಥಿಯರಿಗೆ ೧ ೧೧:೩೧ |
ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನಾವು ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.
|
ಕೊರಿಂಥಿಯರಿಗೆ ೧ ೧೧:೩೪ |
ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.
|
ಕೊರಿಂಥಿಯರಿಗೆ ೨ ೫:೧೦ |
ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.
|
ಕೊರಿಂಥಿಯರಿಗೆ ೨ ೭:೨ |
ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.
|
ಕೊರಿಂಥಿಯರಿಗೆ ೨ ೭:೯ |
ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.
|
ಕೊರಿಂಥಿಯರಿಗೆ ೨ ೭:೧೨ |
ನಾನು ನಿಮಗೆ ಆ ಪತ್ರವನ್ನು ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ-ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.
|
ಕೊರಿಂಥಿಯರಿಗೆ ೨ ೧೨:೧೩ |
ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ.
|
ಕೊರಿಂಥಿಯರಿಗೆ ೨ ೧೨:೧೪ |
ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.
|
ಗಲಾತ್ಯರಿಗೆ ೪:೧೨ |
ಪ್ರಿಯ ಸಹೋದರರೇ, ನಾನು ನಿಮ್ಮಂತೆ ಆದಹಾಗೆ, ನೀವೂ ನನ್ನಂತೆ ಆಗಬೇಕೆಂದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ನೀವು ನನಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.
|
ಫಿಲಿಪಿಯರಿಗೆ ೪:೮ |
ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.
|
ಕೊಲೊಸ್ಸೆಯರಿಗೆ ೩:೨೫ |
ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.
|
ಕೊಲೊಸ್ಸೆಯರಿಗೆ ೪:೧ |
ಯಜಮಾನರೇ, ಸ್ವರ್ಗಲೋಕದಲ್ಲಿ ನಿಮಗೂ ಒಬ್ಬ ಒಡೆಯನಿದ್ದಾನೆಂಬುದನ್ನು ತಿಳಿದುಕೊಂಡು ನಿಮ್ಮ ಮನೆಯಾಳುಗಳನ್ನು ನ್ಯಾಯಬದ್ಧ ರೀತಿಯಲ್ಲಿ ನೋಡಿಕೊಳ್ಳಿ.
|
ಥೆಸೆಲೋನಿಯರಿಗೆ ೨ ೧:೫ |
ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.
|
ಥೆಸೆಲೋನಿಯರಿಗೆ ೨ ೧:೬ |
ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.
|
ತಿಮೊಥೇಯನಿಗ ೨ ೪:೧ |
ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:
|
ತಿಮೊಥೇಯನಿಗ ೨ ೪:೮ |
ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.
|
ಫಿಲೆಮೋನನಿಗೆ ೧:೧೮ |
ಇವನು ನಿನಗೇನಾದರೂ ಅನ್ಯಾಯ ಮಾಡಿದ್ದಾದರೆ, ಅಥವಾ ಇವನಿಂದ ನಿನಗೇನಾದರೂ ಸಲ್ಲಬೇಕಾದ ಬಾಕಿಯಿದ್ದರೆ, ಅದೆಲ್ಲವನ್ನೂ ನನ್ನ ಲೆಕ್ಕಕ್ಕೆ ಹಾಕು.
|
ಹಿಬ್ರಿಯರಿಗೆ ೧:೮ |
ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.
|
ಹಿಬ್ರಿಯರಿಗೆ ೧:೯ |
ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.
|
ಹಿಬ್ರಿಯರಿಗೆ ೫:೧೩ |
ಹಾಲು ಕುಡಿಯಬೇಕಾದವನು ಹಸುಗೂಸು. ನ್ಯಾಯನೀತಿಯ ಅನುಭವ ಅವನಿಗಿಲ್ಲ.
|
ಹಿಬ್ರಿಯರಿಗೆ ೬:೨ |
ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.
|
ಹಿಬ್ರಿಯರಿಗೆ ೬:೧೦ |
ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.
|
ಹಿಬ್ರಿಯರಿಗೆ ೭:೨ |
ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.
|
ಹಿಬ್ರಿಯರಿಗೆ ೯:೨೭ |
ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.
|
ಹಿಬ್ರಿಯರಿಗೆ ೧೦:೩೦ |
“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.
|
ಹಿಬ್ರಿಯರಿಗೆ ೧೧:೩೩ |
ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.
|
ಹಿಬ್ರಿಯರಿಗೆ ೧೨:೧೧ |
ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ.
|
ಹಿಬ್ರಿಯರಿಗೆ ೧೨:೨೩ |
ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;
|
ಹಿಬ್ರಿಯರಿಗೆ ೧೩:೩ |
ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?
|
ಹಿಬ್ರಿಯರಿಗೆ ೧೩:೪ |
ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.
|
ಯಕೋಬನು ೨:೬ |
ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?
|
ಯಕೋಬನು ೨:೧೨ |
ವಿಮೋಚನೆಯನ್ನೀಯುವ ಧರ್ಮಶಾಸ್ತ್ರದ ನ್ಯಾಯತೀರ್ಪಿಗೆ ಗುರಿಯಾಗುವಿರಿ ಎಂದು ತಿಳಿದು ನೀವು ನಡೆಯಲ್ಲೂ ನುಡಿಯಲ್ಲೂ ಯೋಗ್ಯರಾಗಿ ಬಾಳಿ.
|
ಯಕೋಬನು ೨:೧೩ |
ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.
|
ಯಕೋಬನು ೩:೧ |
ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.
|
ಯಕೋಬನು ೩:೧೭ |
ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.
|
ಯಕೋಬನು ೪:೧೧ |
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.
|
ಯಕೋಬನು ೪:೧೨ |
ನ್ಯಾಯವಿಧಿಗಳನ್ನು ಕೊಟ್ಟವರೂ ನ್ಯಾಯಾಧಿಪತಿಯೂ ಒಬ್ಬರೇ; ಅವರೇ ಉದ್ಧಾರಮಾಡುವುದಕ್ಕೂ ವಿನಾಶಗೊಳಿಸುವುದಕ್ಕೂ ಶಕ್ತರು. ಹೀಗಿರುವಲ್ಲಿ, ನಿನ್ನ ನೆರೆಯವನಿಗೆ ತೀರ್ಪುಕೊಡಲು ನೀನು ಯಾರು?
|
ಯಕೋಬನು ೫:೯ |
ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.
|
ಪೇತ್ರನು ೧ ೧:೧೭ |
ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.
|
ಪೇತ್ರನು ೧ ೨:೧೯ |
ಯಾವನಾದರೂ ಅನ್ಯಾಯವಾಗಿ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗಿ ಬಂದಾಗ ಅದನ್ನು ದೇವರ ಹೆಸರಿನಲ್ಲಿ ಸಹಿಸಿಕೊಂಡರೆ ಅವನು ಮೆಚ್ಚುಗೆಯನ್ನು ಗಳಿಸುತ್ತಾನೆ.
|
ಪೇತ್ರನು ೧ ೨:೨೩ |
ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.
|
ಪೇತ್ರನು ೧ ೩:೧೪ |
ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.
|
ಪೇತ್ರನು ೧ ೪:೫ |
ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.
|
ಪೇತ್ರನು ೧ ೪:೧೭ |
ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?
|
ಪೇತ್ರನು ೨ ೨:೯ |
ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.
|
ಪೇತ್ರನು ೨ ೩:೭ |
ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.
|
ಯೊವಾನ್ನನು ೧ ೪:೧೭ |
ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.
|
ಯೂದನು ೧:೧೪ |
ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.
|
ಪ್ರಕಟನೆ ೬:೧೦ |
ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.
|
ಪ್ರಕಟನೆ ೧೧:೧೮ |
ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು\, ಎಂದು ಹಾಡಿದರು.
|
ಪ್ರಕಟನೆ ೧೬:೫ |
ಆಗ ಜಲಾಧಿಕಾರಿಯಾದ ದೂತನು: “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ.
|
ಪ್ರಕಟನೆ ೧೬:೭ |
ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು: “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”
|
ಪ್ರಕಟನೆ ೧೮:೫ |
ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ.
|
ಪ್ರಕಟನೆ ೧೯:೨ |
ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.
|
ಪ್ರಕಟನೆ ೧೯:೧೧ |
ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.
|
ಪ್ರಕಟನೆ ೨೦:೧೨ |
ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.
|
ಪ್ರಕಟನೆ ೨೦:೧೩ |
ಸಮುದ್ರವು ತನ್ನಲ್ಲಿದ್ದ ಮೃತರನ್ನು ಒಪ್ಪಿಸಿತು; ಮೃತ್ಯುವು ಪಾತಾಳವೂ ತಮ್ಮ ವಶದಲ್ಲಿದ್ದ ಮೃತರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ಆಯಿತು.
|
Kannada Bible (KNCL) 2016 |
No Data |